ಸುದ್ದಿಗಳು

ಎನ್ಎಸ್ಇ ವಂಚನೆ ಪ್ರಕರಣ: ಚಿತ್ರಾ ರಾಮಕೃಷ್ಣಗೆ ಜಾಮೀನು ನಿರಾಕರಿಸಿದ ದೆಹಲಿ ನ್ಯಾಯಾಲಯ [ಚುಟುಕು]

Bar & Bench

ರಾಷ್ಟ್ರೀಯ ಷೇರು ವಿನಿಮಯ ಕೇಂದ್ರದ (ಎನ್‌ಎಸ್‌ಇ) ಮಾಜಿ ಉದ್ಯೋಗಿ ಆನಂದ್‌ ಸುಬ್ರಮಣಿಯನ್‌ ಅವರ ಹುದ್ದೆ ಮತ್ತು ವೇತನವನ್ನು ಕಾಲಕಾಲಕ್ಕೆ ಹೆಚ್ಚಿಸಿದ ಆರೋಪದ ಮೇಲೆ ಬಂಧಿತರಾಗಿರುವ ಎನ್‌ಎಸ್‌ಇ ಮಾಜಿ ಮುಖ್ಯಸ್ಥೆ ಚಿತ್ರಾ ರಾಮಕೃಷ್ಣಗೆ ಜಾಮೀನು ನೀಡಲು ಸಿಬಿಐ ವಿಶೇಷ ನ್ಯಾಯಾಲಯ ನಿರಾಕರಿಸಿದೆ. [ಸಿಬಿಐ ಮತ್ತು ಸಂಜಯ್‌ ಗುಪ್ತಾ ಮತ್ತಿತರರ ನಡುವಣ ಪ್ರಕರಣ].

ಚಿತ್ರಾ ಮತ್ತು ಆನಂದ್‌ ಸುಬ್ರಮಣಿಯನ್‌ ಅವರ ಪರ ವಕೀಲರ ವಾದ ಆಲಿಸಿದ ನಂತರ ವಿಶೇಷ ನ್ಯಾಯಾಧೀಶ ಸಂಜೀವ್‌ ಅಗರ್‌ವಾಲ್‌ ಜಾಮೀನು ಅರ್ಜಿ ನಿರಾಕರಿಸಿದರು. ಇನ್ನಷ್ಟೇ ಆದೇಶದ ಪ್ರತಿ ಲಭ್ಯವಾಗಬೇಕಿದೆ.

ಹೆಚ್ಚಿನ ಮಾಹಿತಿಗೆ ʼಬಾರ್‌ ಅಂಡ್‌ ಬೆಂಚ್‌ʼ ಇಂಗ್ಲಿಷ್‌ ತಾಣದ ಲಿಂಕ್‌ ಗಮನಿಸಿ.