<div class="paragraphs"><p>Justices Dinesh Maheshwari, AM Khanwilkar and CT Ravikumar</p></div>

Justices Dinesh Maheshwari, AM Khanwilkar and CT Ravikumar

 
ಸುದ್ದಿಗಳು

ಮಹಾರಾಷ್ಟ್ರ ಸ್ಥಳೀಯ ಸಂಸ್ಥೆಗಳ ಚುನಾವಣೆ: ಒಬಿಸಿ ಮೀಸಲಾತಿಗೆ ಶಿಫಾರಸು ಮಾಡಿದ್ದ ಮಧ್ಯಂತರ ವರದಿ ತಿರಸ್ಕರಿಸಿದ ಸುಪ್ರೀಂ

Bar & Bench

ಮಹಾರಾಷ್ಟ್ರದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇತರೆ ಹಿಂದುಳಿದ ವರ್ಗಗಳಿಗೆ (ಒಬಿಸಿ) ಮೀಸಲಾತಿ ಶಿಫಾರಸು ಮಾಡಿ ಹಿಂದುಳಿದ ವರ್ಗ ಆಯೋಗ ಸಲ್ಲಿಸಿದ್ದ ಮಧ್ಯಂತರ ವರದಿಗೆ ಸುಪ್ರೀಂ ಕೋರ್ಟ್‌ ಗುರುವಾರ ಅಸಮ್ಮತಿ ಸೂಚಿಸಿದೆ [ರಾಹುಲ್‌ ರಮೇಶ್‌ ವಾಘ್‌ ಮತ್ತು ಮಹಾರಾಷ್ಟ್ರ ಸರ್ಕಾರ ನಡುವಣ ಪ್ರಕರಣ].

ಚುನಾವಣಾ ಮೀಸಲಾತಿ ಕಾಯ್ದಿರಿಸುವ ಮೊದಲು ತ್ರಿವಳಿ ಪರೀಕ್ಷಾ ಮಾನದಂಡ ಪೂರೈಸಬೇಕು ಎಂದು ತಾನು ವಿಕಾಸ್ ಕಿಶನ್‌ರಾವ್ ಗಾವಳಿ ಮತ್ತು ಮಹಾರಾಷ್ಟ್ರ ಸರ್ಕಾರ ನಡುವಣ ಪ್ರಕರಣದಲ್ಲಿ ನೀಡಿದ್ದ ಆದೇಶವನ್ನು ವರದಿ ಪಾಲಿಸಿಲ್ಲ ಎಂದು ನ್ಯಾಯಮೂರ್ತಿಗಳಾದ ಎ ಎಂ ಖಾನ್ವಿಲ್ಕರ್, ದಿನೇಶ್ ಮಾಹೇಶ್ವರಿ ಮತ್ತು ಸಿ ಟಿ ರವಿಕುಮಾರ್ ಅವರಿದ್ದ ಪೀಠ ತಿಳಿಸಿದೆ.

ಅಲ್ಲದೆ ಆಯೋಗದ ಪ್ರಾಯೋಗಿಕ ಅಧ್ಯಯನ ಮತ್ತು ಸಂಶೋಧನೆಯ ಅನುಪಸ್ಥಿತಿಯಲ್ಲಿ ವರದಿ ಸಿದ್ಧವಾಗಿದೆ ಎಂದು ಖುದ್ದು ಮಧ್ಯಂತರ ವರದಿಯಲ್ಲಿ ಹೇಳಿರುವುದನ್ನು ನ್ಯಾಯಾಲಯ ಗಮನಿಸಿದೆ.

ಈ ಹಿನ್ನೆಲೆಯಲ್ಲಿ ಮಧ್ಯಂತರ ವರದಿಯನ್ನು ಅನುಸರಿಸದಂತೆ ನ್ಯಾಯಾಲಯವು ಸೂಚಿಸಿದ್ದು ಶೇ. 27ರಷ್ಟು ಒಬಿಸಿ ಮೀಸಲಾತಿಯನ್ನು ಅನುಷ್ಠಾನಗೊಳಿಸದೆ ಚುನಾವಣೆ ನಡೆಸುವಂತೆ ನಿರ್ದೇಶಿಸಿದೆ.