ವಕೀಲರಲ್ಲದವರು ವಾಹನದಲ್ಲಿ ವಕೀಲರ ಚಿಹ್ನೆ ಲಗತ್ತಿಸಿದರೆ ಕ್ರಮ: ಕೆಎಸ್‌ಬಿಸಿ ಎಚ್ಚರಿಕೆ

ವಕೀಲರಲ್ಲದವರು ಹಾಗೂ ವಾಣಿಜ್ಯ ವಾಹನಗಳಿಗೆ ವಕೀಲರ ಚಿಹ್ನೆ ಲಗತ್ತಿಕೊಂಡು, ತಾವು ವಕೀಲರು ಎಂದು ಸಾರ್ವಜನಿಕರಿಗೆ ಸುಳ್ಳು ಹೇಳಿಕೊಂಡು ಓಡಾಡುತ್ತಿದ್ದು, ವೃತ್ತಿಗೆ ಅವಮಾನಿಸುತ್ತಿದ್ದಾರೆ ಎಂದು ಬೇಸರಿಸಿರುವ ಕೆಎಸ್‌ಬಿಸಿ.
KSBC
KSBC
Published on

ರಾಜ್ಯದಲ್ಲಿ ವಕೀಲರಲ್ಲದವರು ತಮ್ಮ ವಾಹನಗಳ ಮೇಲೆ ವಕೀಲರ  ಚಿಹ್ನೆ ಲಗತ್ತಿಸಿದ್ದರೆ, ಅಂತಹ ವಾಹನಗಳ ಸಂಖ್ಯೆ ಮತ್ತು ಪೋಟೋವನ್ನು ಕಳುಹಿಸಿಕೊಡುವಂತೆ ಸಾರ್ವಜನಿಕರು ಹಾಗೂ ವಕೀಲರಲ್ಲಿ ಕರ್ನಾಟಕ ರಾಜ್ಯ ವಕೀಲರ ಪರಿಷತ್‌ (ಕೆಎಸ್‌ಬಿಸಿ) ಮನವಿ ಮಾಡಿದೆ.

ಈ ಕುರಿತು ಪ್ರಕಟಣೆ ನೀಡಿರುವ ವಕೀಲರ ಪರಿಷತ್‌ ಅಧ್ಯಕ್ಷ ಎಸ್‌ ಎಸ್‌ ಮಿಟ್ಟಲಕೋಡ ಅವರು ರಾಜ್ಯದಲ್ಲಿ ವಕೀಲರಲ್ಲದವರು ಹಾಗೂ ವಾಣಿಜ್ಯ ವಾಹನಗಳಿಗೆ ವಕೀಲರ ಚಿಹ್ನೆ ಲಗತ್ತಿಕೊಂಡು, ತಾವು ವಕೀಲರು ಎಂದು ಸಾರ್ವಜನಿಕರಿಗೆ ಸುಳ್ಳು ಹೇಳಿಕೊಂಡು ಓಡಾಡುತ್ತಿದ್ದಾರೆ. ಆ ಮೂಲಕ ವಕೀಲರ ಸಮುದಾಯದ ಹೆಸರು ದುರುಪಯೋಗ ಹಾಗೂ   ವಕೀಲ ವೃತ್ತಿಗೆ ಅವಮಾನ ಮಾಡುತ್ತಿದ್ದಾರೆ. ಆದ್ದರಿಂದ ವಕೀಲರಲ್ಲದವರು ತಮ್ಮ ವಾಹನಗಳ ಮೇಲೆ ವಕೀಲರ ಚಿಹ್ನೆ ಅಳವಡಿಸಿಕೊಂಡಿದ್ದರೆ, ಅಂತಹ ವಾಹನಗಳ ಸಂಖ್ಯೆ/ಫೋಟೊವನ್ನು ಪರಿಷತ್ತಿನ ಅಧಿಕೃತ ಇ-ಮೇಲ್‌ Kar_barcouncil@yahoo.com ಗೆ ಕಳುಹಿಸಿಕೊಡಬೇಕು. ಅಂತಹವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುತ್ತದೆ ಎಂದು ಮನವಿ ಮಾಡಿದ್ದಾರೆ.

Kannada Bar & Bench
kannada.barandbench.com