ದೇಶದ್ರೋಹ ಆರೋಪ: ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ ಲಕ್ಷದ್ವೀಪದ ನಿರ್ಮಾಪಕಿ ಆಯಿಷಾ ಸುಲ್ತಾನಾ

ದ್ವೀಪ ಸಮೂಹದ ಆಡಳಿತಾಧಿಕಾರಿ ಪ್ರಫುಲ್ ಪಟೇಲ್ ಮತ್ತು ನಡುಗಡ್ಡೆಗಳಲ್ಲಿ ಏರಿಕೆಯಾಗುತ್ತಿರುವ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಳಕ್ಕೆ ಸಂಬಂಧಿಸಿದಂತೆ ಕವರತ್ತಿಯಲ್ಲಿ ಅವರ ವಿರುದ್ಧ ಎಫ್ಐಆರ್ ದಾಖಲಿಸಲಾಗಿತ್ತು.
Aisha Sultana, Kerala High Court
Aisha Sultana, Kerala High Court

ದೇಶದ್ರೋಹ ಆರೋಪದ ಹಿನ್ನೆಲೆಯಲ್ಲಿ ತನ್ನ ವಿರುದ್ಧ ಐಪಿಸಿ ಸೆಕ್ಷನ್‌ 124 ಎ ಅಡಿ ದಾಖಲಿಸಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರೀಕ್ಷಣಾ ಜಾಮೀನು ಒದಗಿಸಬೇಕೆಂದು ಕೋರಿ ಲಕ್ಷದ್ವೀಪದ ಚಲನಚಿತ್ರ ನಿರ್ಮಾಪಕಿ ಆಯಿಷಾ ಸುಲ್ತಾನ ಕೇರಳ ಹೈಕೋರ್ಟ್‌ ಮೊರೆ ಹೋಗಿದ್ದಾರೆ.

"ಕೋವಿಡ್‌ ಹರಡುವಿಕೆ ಬಗ್ಗೆ ಸುಲ್ತಾನಾ ಟಿವಿ ಕಾರ್ಯಕ್ರಮವೊಂದರಲ್ಲಿ ಸುಳ್ಳು ಮಾಹಿತಿ ನೀಡಿದ್ದಾರೆ. ಅವರು ಲಕ್ಷದ್ವೀಪದ ನೂತನ ಆಡಳಿತಾಧಿಕಾರಿ ಪ್ರಫುಲ್‌ ಪಟೇಲ್‌ ಅವರ ವಿರುದ್ಧ ಮಾಡಿರುವ ಟೀಕೆ ರಾಷ್ಟ್ರ ವಿರೋಧಿ ಕೃತ್ಯ" ಎಂದು ದ್ವೀಪದ ಬಿಜೆಪಿ ನಾಯಕರೊಬ್ಬರು ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಕವರಟ್ಟಿ ಪೊಲೀಸರು ನಟಿ ವಿರುದ್ಧ ಪ್ರಕರಣ ಎಫ್‌ಐಆರ್‌ ದಾಖಲಿಸಿಕೊಂಡಿದ್ದರು.

Also Read
ಲಕ್ಷದ್ವೀಪ ನೂತನ ಕರಡು ಪ್ರಶ್ನಿಸಿ ಕೇರಳ ಹೈಕೋರ್ಟ್‌ನಲ್ಲಿ ಅರ್ಜಿ: ಪ್ರತಿವಾದಿಗಳ ಪ್ರತಿಕ್ರಿಯೆ ಕೇಳಿದ ನ್ಯಾಯಾಲಯ

ಪ್ರಕರಣ ದಾಖಲಿಸಿಕೊಂಡದ್ದನ್ನು ಕೇರಳದಲ್ಲಿ ವ್ಯಾಪಕವಾಗಿ ಖಂಡಿಸಲಾಗಿತ್ತು. ಉದ್ದೇಶಿತ ಲಕ್ಷದ್ವೀಪ ಅಭಿವೃದ್ಧಿ ಪ್ರಾಧಿಕಾರ ನಿಯಂತ್ರಣ ನಿಯಮಾವಳಿ ಮಸೂದೆ, , ಲಕ್ಷದ್ವೀಪ ಸಾಮಾಜಿಕ ವಿರೋಧಿ ಚಟುವಟಿಕೆಗಳ ನಿಯಂತ್ರಣ ವಿಧೇಯಕ ಲಕ್ಷದ್ವೀಪ ಪ್ರಾಣಿ ಸಂರಕ್ಷಣಾ ನಿಯಂತ್ರಣ ನಿಯಮಾವಳಿಗಳ ವಿರುದ್ಧ ಕೋವಿಡ್‌ ನಡುವೆಯೂ ದ್ವೀಪದ ಜನ ಪ್ರತಿಭಟನೆ ನಡೆಸುತ್ತಿದ್ದಾರೆ.

ನೂತನ ಆಡಳಿಗಾರ ಪಟೇಲ್‌ ಅವರನ್ನು ಹಿಂದಕ್ಕೆ ಕರೆಸಿಕೊಳ್ಳಬೇಕು ಎಂದು ಒತ್ತಾಯಿಸಿ ಕೇರಳ ವಿಧಾನಸಭೆ ಇತ್ತೀಚೆಗೆ ಸರ್ವಾನುಮತದ ನಿರ್ಣಯವನ್ನು ಕೂಡ ಕೈಗೊಂಡಿತ್ತು.

Related Stories

No stories found.
Kannada Bar & Bench
kannada.barandbench.com