ಸ್ವಾಮಿ ರಾಮಭದ್ರಾಚಾರ್ಯ ವಿರುದ್ಧ ಎಸ್‌ಸಿ, ಎಸ್‌ಟಿ ಕಾಯಿದೆಯಡಿ ಎಫ್ಐಆರ್: ಅರ್ಜಿ ತಿರಸ್ಕರಿಸಿದ ಅಲಾಹಾಬಾದ್ ಹೈಕೋರ್ಟ್

ರಾಮಭಧ್ರಾಚಾರ್ಯರ ವಿರುದ್ಧದ ಆರೋಪ ಐಪಿಸಿ, ಎಸ್‌ಸಿ/ಎಸ್‌ಟಿ ಕಾಯಿದೆ ಅಥವಾ ಐಟಿ ಕಾಯಿದೆಯ ಸೆಕ್ಷನ್ 67ರ ಅಡಿಯಲ್ಲಿ ಅಪರಾಧವಲ್ಲ ಎಂದು ಹೈಕೋರ್ಟ್ ಹೇಳಿದೆ.
Swami Rambhadracharya, Allahabad High Court
Swami Rambhadracharya, Allahabad High Court
Published on

ಪರಿಶಿಷ್ಟ ಜಾತಿ  ಸಮುದಾಯದವರ ವಿರುದ್ಧ ಆಕ್ಷೇಪಾರ್ಹ  ಹೇಳಿಕೆ ನೀಡಿದ್ದ ಆರೋಪದ ಮೇಲೆ ಹಿಂದೂ ಆಧ್ಯಾತ್ಮಿಕ ನಾಯಕ ಮತ್ತು ಪದ್ಮವಿಭೂಷಣ ಪುರಸ್ಕೃತ ಸ್ವಾಮಿ ರಾಮಭದ್ರಾಚಾರ್ಯ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಕೋರಿದ್ದ ಮನವಿಯನ್ನು ಅಲಾಹಾಬಾದ್ ಹೈಕೋರ್ಟ್ ಇತ್ತೀಚೆಗೆ ವಜಾಗೊಳಿಸಿದೆ [ಪ್ರಕಾಶ್ ಚಂದ್ರ ವಿರುದ್ಧ ಉತ್ತರ ಪ್ರದೇಶ ಸರ್ಕಾರ ಇನ್ನಿತರರ ನಡುವಣ ಪ್ರಕರಣ] .

ರಾಮಭಧ್ರಾಚಾರ್ಯರ ವಿರುದ್ಧದ ಆರೋಪ ಐಪಿಸಿ, ಎಸ್‌ಸಿ, ಎಸ್‌ಟಿ ಕಾಯಿದೆ ಅಥವಾ ಐಟಿ ಕಾಯಿದೆಯ ಸೆಕ್ಷನ್ 67ರ ಅಡಿಯಲ್ಲಿ  ಅಪರಾಧವಲ್ಲ ಎಂಬುದು ಸ್ಫಟಿಕದಷ್ಟು ಸ್ಪಷ್ಟವಾಗಿದೆ ಎಂದು ನ್ಯಾಯಮೂರ್ತಿ ಸೌರಭ್ ಶ್ರೀವಾಸ್ತವ ಅವರು ಅಕ್ಟೋಬರ್ 4ರಂದು ನೀಡಿದ ಆದೇಶದಲ್ಲಿ ತಿಳಿಸಿದ್ದಾರೆ.

Also Read
ನ್ಯಾಯಾಂಗ ನಿಂದನೆ ಪ್ರಕರಣ: ಪ್ರತಿಕ್ರಿಯೆ ಸಲ್ಲಿಸಲು ಯತಿ ನರಸಿಂಗಾನಂದರಿಗೆ ಸುಪ್ರೀಂ ಕೋರ್ಟ್‌ ಸೂಚನೆ

ಈ ವರ್ಷದ ಜನವರಿಯಲ್ಲಿ, ಸ್ವಾಮಿ ರಾಮಭದ್ರಾಚಾರ್ಯರು " ಶ್ರೀರಾಮನನ್ನು ಪೂಜಿಸದವರು " ಎಂದು ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿ  ಟೀಕೆಗೆ ಗುರಿಯಾಗಿತ್ತು. ನಂತರ ವಿವಾದದ ಕುರಿತು ಪ್ರತಿಕ್ರಿಯಿಸಿದ್ದ ಅವರು , ತಮ್ಮ ಹೇಳಿಕೆಗಳು ಜಾತಿವಾದಿ ಆಗಿರಲಿಲ್ಲ ಎಂದಿದ್ದರು.

ಈ ವರ್ಷದ ಫೆಬ್ರವರಿಯಲ್ಲಿ, ಸ್ವಾಮಿ ರಾಮಭದ್ರಾಚಾರ್ಯರ ವಿರುದ್ಧ ಕ್ರಿಮಿನಲ್ ದೂರು ದಾಖಲಿಸಲು ಪ್ರಕಾಶ್ ಚಂದ್ರ ಎಂಬುವರು ಮಾಡಿದ ಮನವಿಯನ್ನು ಪ್ರಯಾಗರಾಜ್‌ನ ವಿಚಾರಣಾ ನ್ಯಾಯಾಲಯ ವಜಾಗೊಳಿಸಿತ್ತು. ಕ್ರಿಮಿನಲ್ ಪ್ರಕ್ರಿಯಾ ಸಂಹಿತೆಯ (ಸಿಆರ್‌ಪಿಸಿ) ಸೆಕ್ಷನ್ 156 (3) ಅಡಿಯಲ್ಲಿ ಚಂದ್ರ ಅವರು ಈ ಅರ್ಜಿ ಸಲ್ಲಿಸಿದ್ದರು. ವಿಚಾರಣಾ ನ್ಯಾಯಾಲಯ ಅರ್ಜಿ ನಿರ್ವಹಿಸಲು ಸಾಧ್ಯವಿಲ್ಲ ಎಂದು ವಜಾಗೊಳಿಸಿದ ನಂತರ, ಚಂದ್ರು ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದರು.

ತನ್ನ ಅಕ್ಟೋಬರ್ 4 ರ ತೀರ್ಪಿನಲ್ಲಿ ಹೈಕೋರ್ಟ್‌ ವಿಚಾರಣಾ ನ್ಯಾಯಾಲಯದ ಆದೇಶವನ್ನು ಎತ್ತಿಹಿಡಿದಿದೆ. ಸಿಆರ್‌ಪಿಸಿಯ ಸೆಕ್ಷನ್ 156 (3) ರ ಅಡಿಯಲ್ಲಿ ಈ ವಿಷಯದಲ್ಲಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಚಂದ್ರು ಕೋರಲು ಸಾಧ್ಯವಿಲ್ಲ ಎಂದು ಅದು ಹೇಳಿದೆ. ಹೀಗಾಗಿ ಅದು ಮೇಲ್ಮನವಿಯನ್ನು ವಜಾಗೊಳಿಸಿತು.

Kannada Bar & Bench
kannada.barandbench.com