ದೆಹಲಿ ಅಬಕಾರಿ ನೀತಿ ಪ್ರಕರಣ: ಸಿಬಿಐ ಬಂಧನ ಪ್ರಶ್ನಿಸಿ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ ಅರವಿಂದ್ ಕೇಜ್ರಿವಾಲ್

ದೆಹಲಿ ಮುಖ್ಯಮಂತ್ರಿ ಅವರನ್ನು ಜೂನ್ 26ರಂದು ಬಂಧಿಸಿದ್ದ ಸಿಬಿಐ ಮೂರು ದಿನಗಳ ಕಾಲ ತನ್ನ ಕಸ್ಟಡಿಗೆ ಪಡೆದುಕೊಂಡಿತ್ತು.
Arvind Kejriwal and Delhi High Court
Arvind Kejriwal and Delhi High Court
Published on

ಅಬಕಾರಿ ನೀತಿ ಕುರಿತ ಭ್ರಷ್ಟಾಚಾರ ಪ್ರಕರಣದಲ್ಲಿ ಸಿಬಿಐ ತಮ್ಮನ್ನು ಬಂಧಿಸಿರುವುದನ್ನು ಮತ್ತು ವಿಚಾರಣಾ ನ್ಯಾಯಾಲಯ ಸಿಬಿಐ ವಶಕ್ಕೆ ನೀಡಿದ ಆದೇಶವನ್ನು ಪ್ರಶ್ನಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ತಮ್ಮ ಬಂಧನ ಕಾನೂನುಬಾಹಿರವಲ್ಲ ಎಂದಿದ್ದ ವಿಚಾರಣಾ ನ್ಯಾಯಾಲಯದ ಅವಲೋಕನವನ್ನು ಕೂಡ ಕೇಜ್ರಿವಾಲ್‌ ಪ್ರಶ್ನಿಸಿದ್ದಾರೆ.

Also Read
ಅಬಕಾರಿ ನೀತಿ: ಸಿಬಿಐ ಪ್ರಕರಣದಲ್ಲಿ ಜುಲೈ 12ರವರೆಗೆ ಅರವಿಂದ್‌ ಕೇಜ್ರಿವಾಲ್‌ಗೆ ನ್ಯಾಯಾಂಗ ಬಂಧನ

ಜಾರಿ ನಿರ್ದೇಶನಾಲಯ (ಇ ಡಿ) ದಾಖಲಿಸಿರುವ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಿಹಾರ್ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಕೇಜ್ರಿವಾಲ್ ಅವರನ್ನು ಜೂನ್ 26 ರಂದು ಸಿಬಿಐ ಬಂಧಿಸಿತ್ತು.

ಇತ್ತೀಚೆಗೆ ಇ ಡಿ ಪ್ರಕರಣದಲ್ಲಿ ಅವರಿಗೆ ವಿಚಾರಣಾ ನ್ಯಾಯಾಲಯ ಜಾಮೀನು ನೀಡಿತ್ತು. ಆದರೆ ಇ ಡಿ ಜಾಮೀನು ವಿರೋಧಿಸಿ ತುರ್ತು ಮನವಿ ಸಲ್ಲಿಸಿತ್ತು. ವಿಚಾರಣೆ ನಡೆಸಿದ್ದ ದೆಹಲಿ ಹೈಕೋರ್ಟ್‌ ಜಾಮೀನು ಆದೇಶಕ್ಕೆ ಮಧ್ಯಂತರ ತಡೆ ನೀಡಿತ್ತು. ಈ ತಡೆಯಾಜ್ಞೆಯನ್ನು ಅದೇ ಪೀಠ ಜೂನ್ 25ರಂದು ದೃಢಪಡಿಸಿತ್ತು.  

Also Read
ಸುದ್ದಿಗೆ ಗ್ರಾಸ ಒದಗಿಸಲೆಂದು ಸಿಬಿಐ ಹೇಳಿಕೆ: ಬಂಧನ ವಿರೋಧಿಸಿದ ಅರವಿಂದ್ ಕೇಜ್ರಿವಾಲ್

ಇದರ ಬೆನ್ನಿಗೇ ಜೂನ್ 26ರಂದು  ದೆಹಲಿ ಮುಖ್ಯಮಂತ್ರಿ ಅವರನ್ನು ಬಂಧಿಸಿದ ಸಿಬಿಐ ಜೂನ್ 29ರವರೆಗೆ ಮೂರು ದಿನಗಳ ಕಾಲ ತನ್ನ ಕಸ್ಟಡಿಗೆ  ಪಡೆದುಕೊಂಡಿತ್ತು. ಬಳಿಕ ಅದು ಕಸ್ಟಡಿ ಅವಧಿ ವಿಸ್ತರಿಸದಂತೆ ಕೋರದ ಹಿನ್ನೆಲೆಯಲ್ಲಿ ಜುಲೈ 12ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಲಾಗಿತ್ತು.

ದೆಹಲಿ ಅಬಕಾರಿ ನೀತಿ ಕರಡು ರಚನೆಯಲ್ಲಿ ನಡೆದಿದೆ ಎನ್ನಲಾದ ಹಗರಣಕ್ಕೆ ಸಂಬಂಧಿಸಿದಂತೆ ಇ ಡಿ ಮತ್ತು ಸಿಬಿಐ ಎರಡೂ ತನಿಖೆ ನಡೆಸುತ್ತಿವೆ.

Kannada Bar & Bench
kannada.barandbench.com