ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಪ್ರಕರಣ: ಆರೋಪಿಗಳನ್ನು ನ. 29ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿದ ಮಾಗಡಿ ನ್ಯಾಯಾಲಯ

ನವೆಂಬರ್‌ 5ರಂದು ನ್ಯಾಯಾಲಯವು ಅವರನ್ನು 10 ದಿನ ನ್ಯಾಯಾಂಗ ಬಂಧನಕ್ಕೆ ನೀಡಿತ್ತು. ಇದಕ್ಕೂ ಮುನ್ನ ತನಿಖೆಗಾಗಿ ಪೊಲೀಸ್‌ ಕಸ್ಟಡಿಗೆ ನೀಡಲಾಗಿತ್ತು.
ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಪ್ರಕರಣ: ಆರೋಪಿಗಳನ್ನು ನ. 29ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿದ ಮಾಗಡಿ ನ್ಯಾಯಾಲಯ

ರಾಮನಗರ ಜಿಲ್ಲೆಯ ಮಾಗಡಿಯ ಕಂಚುಗಲ್ ಬಂಡೆ ಮಠದ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಪ್ರಕರಣದ ಮೂವರು ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು ಸತತ ಎರಡನೇ ಬಾರಿಗೆ ಮಂಗಳವಾರ ನ್ಯಾಯಾಲಯ ವಿಸ್ತರಿಸಿದ್ದು, ನವೆಂಬರ್‌ 29ರವರೆಗೆ ಆರೋಪಿಗಳನ್ನು ಜೈಲಿಗೆ ಕಳುಹಿಸಿದೆ.

ನ್ಯಾಯಾಂಗ ಬಂಧನವು ಇಂದು ಮುಗಿಯುತ್ತಿದ್ದ ಹಿನ್ನೆಲೆಯಲ್ಲಿ ಆರೋಪಿಗಳಾದ ಮೃತ್ಯುಂಜಯ ಸ್ವಾಮೀಜಿ, ನೀಲಾಂಬಿಕೆ ಹಾಗೂ ವಕೀಲ ಮಹದೇವಯ್ಯ ಅವರನ್ನು ಮಾಗಡಿಯ ಹೆಚ್ಚುವರಿ ಸಿವಿಲ್‌ ನ್ಯಾಯಾಧೀಶೆ ಮತ್ತು ಜೆಎಂಎಫ್‌ಸಿ ಎಂ ಧನಲಕ್ಷ್ಮಿ ಅವರ ಮುಂದೆ ಹಾಜರುಪಡಿಸಲಾಯಿತು. ಈ ವೇಳೆ ಪೀಠವು ಆರೋಪಿಗಳ ನ್ಯಾಯಾಂಗ ಬಂಧನವನ್ನು 15 ದಿನ ವಿಸ್ತರಿಸಿದೆ. ನವೆಂಬರ್‌ 5ರಂದು ನ್ಯಾಯಾಲಯವು ಅವರನ್ನು 10 ದಿನ ನ್ಯಾಯಾಂಗ ಬಂಧನಕ್ಕೆ ನೀಡಿತ್ತು. ಇದಕ್ಕೂ ಮುನ್ನ ತನಿಖೆಗಾಗಿ ಪೊಲೀಸ್‌ ಕಸ್ಟಡಿಗೆ ನೀಡಲಾಗಿತ್ತು.

Also Read
ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಪ್ರಕರಣ: ಆರೋಪಿಗಳನ್ನು ನ.15ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿದ ಮಾಗಡಿ ನ್ಯಾಯಾಲಯ

ಮೃತ್ಯುಂಜಯ ಸ್ವಾಮೀಜಿ ಹಾಗೂ ವಕೀಲ ಮಹದೇವಯ್ಯ ಅವರನ್ನು ರಾಮನಗರ ಜಿಲ್ಲಾ ನ್ಯಾಯಾಲಯಕ್ಕೆ ಹಾಗೂ ನೀಲಾಂಬಿಕೆಯನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿಗೆ ಸ್ಥಳಾಂತರಿಸಲಾಗಿದೆ.

Related Stories

No stories found.
Kannada Bar & Bench
kannada.barandbench.com