ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಪ್ರಕರಣ: ಆರೋಪಿಗಳನ್ನು ನ. 5ರವರೆಗೆ ಪೊಲೀಸ್ ಕಸ್ಟಡಿಗೆ ನೀಡಿದ ಮಾಗಡಿ ನ್ಯಾಯಾಲಯ

ಮಾಗಡಿಯ ಹೆಚ್ಚುವರಿ ಸಿವಿಲ್‌ ನ್ಯಾಯಾಧೀಶೆ ಮತ್ತು ಜೆಎಂಎಫ್‌ಸಿ ಎಂ ಧನಲಕ್ಷ್ಮಿ ಅವರ ಮುಂದೆ ಆರೋಪಿಗಳಾದ ಮೃತ್ಯುಂಜಯ ಸ್ವಾಮೀಜಿ, ನೀಲಾಂಬಿಕೆ ಹಾಗೂ ವಕೀಲ ಮಹದೇವಯ್ಯ ಅವರನ್ನು ಪೊಲೀಸರು ಹಾಜರುಪಡಿಸಿದರು.
ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಪ್ರಕರಣ: ಆರೋಪಿಗಳನ್ನು ನ. 5ರವರೆಗೆ ಪೊಲೀಸ್ ಕಸ್ಟಡಿಗೆ ನೀಡಿದ ಮಾಗಡಿ ನ್ಯಾಯಾಲಯ

ರಾಮನಗರ ಜಿಲ್ಲೆಯ ಮಾಗಡಿಯ ಕಂಚುಗಲ್ ಬಂಡೆ ಮಠದ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತಾಗಿರುವ ಮೂವರು ಆರೋಪಿಗಳನ್ನು ಮಾಗಡಿ ನ್ಯಾಯಾಲಯವು ವಿಚಾರಣೆಗಾಗಿ ಐದು ದಿ‌ನ ಕಾಲ ಪೊಲೀಸ್ ಕಸ್ಟಡಿಗೆ ಸೋಮವಾರ ನೀಡಿದೆ.

ಮಾಗಡಿಯ ಹೆಚ್ಚುವರಿ ಸಿವಿಲ್‌ ನ್ಯಾಯಾಧೀಶೆ ಮತ್ತು ಜೆಎಂಎಫ್‌ಸಿ ಎಂ ಧನಲಕ್ಷ್ಮಿ ಅವರ ಮುಂದೆ ಆರೋಪಿಗಳಾದ ಮೃತ್ಯುಂಜಯ ಸ್ವಾಮೀಜಿ, ನೀಲಾಂಬಿಕೆ ಹಾಗೂ ವಕೀಲ ಮಹದೇವಯ್ಯ ಅವರನ್ನು ಪೊಲೀಸರು ಹಾಜರುಪಡಿಸಿದರು.

ಹೆಚ್ಚಿನ ವಿಚಾರಣೆಗೆ ಆರೋಪಿಗಳನ್ನು ವಶಕ್ಕೆ ನೀಡುವಂತೆ ಸರ್ಕಾರಿ ಅಭಿಯೋಜಕರು ಮನವಿ ಮಾಡಿದರು. ಇದನ್ನು ಪುರಸ್ಕರಿಸಿದ ನ್ಯಾಯಾಧೀಶರು ಆರೋಪಿಗಳನ್ನು ನವೆಂಬರ್ 4ರ ವರೆಗೆ ಪೊಲೀಸ್ ವಶಕ್ಕೆ ನೀಡಿ ಆದೇಶಿಸಿದರು.

ಅಕ್ಟೋಬರ್‌ 24ರಂದು ಮಾಗಡಿ ತಾಲ್ಲೂಕಿನ ಕಂಚುಗಲ್ ಬಂಡೆ ಮಠದ ಬಸವಲಿಂಗ ಸ್ವಾಮೀಜಿ (45) ತಮ್ಮ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಸ್ಥಳದಲ್ಲಿ ದೊರೆತ ಡೆತ್‌ನೋಟ್‌, ಸ್ವಾಮೀಜಿ ಹನಿಟ್ರ್ಯಾಪ್‌ಗೆ ಒಳಗಾಗಿರುವ ಸುಳಿವು ನೀಡಿತ್ತು. ಅದನ್ನು ಆಧರಿಸಿ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದರು.

Also Read
ಬಂಡೆಮಠದ ಸ್ವಾಮೀಜಿ ಆತ್ಮಹತ್ಯೆ ಪ್ರಕರಣ: ಕಣ್ಣೂರು ಶ್ರೀ ಸೇರಿ ಮೂವರಿಗೆ 14 ದಿನ ನ್ಯಾಯಾಂಗ ಬಂಧನ

ಬಸವಲಿಂಗ ಸ್ವಾಮೀಜಿ ಹಾಗೂ ಆರೋಪಿ ನೀಲಾಂಬಿಕೆ ವರ್ಷದ ಹಿಂದೆಯೇ ಪರಿಚಯ ಆಗಿದ್ದು, ಕ್ರಮೇಣ ಸಲುಗೆ ಬೆಳೆದಿತ್ತು. ಕಳೆದ ಫೆಬ್ರುವರಿಯಿಂದ ಈ ಇಬ್ಬರು ನಿರಂತರ ಸಂಪರ್ಕದಲ್ಲಿ ಇದ್ದರು. ವಿಡಿಯೊ ಚಾಟ್‌ಗಳ ಮೂಲಕ ಖಾಸಗಿ ಕ್ಷಣಗಳನ್ನೂ ಹಂಚಿಕೊಂಡಿದ್ದರು. ಏಪ್ರಿಲ್‌ನಲ್ಲಿ ಈ ಎಲ್ಲವನ್ನೂ ವಿಡಿಯೊ ಮಾಡಿಕೊಂಡ ನೀಲಾಂಬಿಕೆ ಅದನ್ನು ಮೃತ್ಯುಂಜಯ ಸ್ವಾಮೀಜಿಗೆ ತಲುಪಿಸಿದ್ದಳು. ಸ್ವಾಮೀಜಿ ಅದನ್ನು ವಕೀಲ ಮಹದೇವಯ್ಯರಿಗೆ ತಲುಪಿಸಿ, ಎಡಿಟ್ ಮಾಡಿಸಿ ಸಿ ಡಿ ಮಾಡಿಸಿಕೊಂಡಿದ್ದರು. ಅಲ್ಲಿಂದ ಬಸವಲಿಂಗ ಸ್ವಾಮೀಜಿಗೆ ಬ್ಲಾಕ್‌ಮೇಲ್ ಮಾಡಲಾಗಿತ್ತು. ನಂತರದಲ್ಲಿ ಆ ಸಿ ಡಿಯನ್ನು ಹಲವು ಮುಖಂಡರಿಗೂ ಹಂಚಲಾಗಿತ್ತು. ಇದಕ್ಕೆ ಹೆದರಿ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಡೆತ್‌ನೋಟ್‌ನಲ್ಲಿ ಉಲ್ಲೇಖಿಸಿದ್ದರು ಎನ್ನಲಾಗಿದೆ.

Related Stories

No stories found.
Kannada Bar & Bench
kannada.barandbench.com