ಬುಲ್ಲಿ ಬಾಯ್ ಪ್ರಕರಣ: ಮೂವರು ಆರೋಪಿಗಳ ಜಾಮೀನು ಅರ್ಜಿ ತಿರಸ್ಕರಿಸಿದ ಮುಂಬೈ ನ್ಯಾಯಾಲಯ

ಜಾಮೀನು ಅರ್ಜಿಗೆ ಸಂಬಂಧಿಸಿದಂತೆ ಬಾಂದ್ರಾ ಮೆಟ್ರೋಪಾಲಿಟನ್ ನ್ಯಾಯಾಲಯದ ನ್ಯಾಯಾಧೀಶ ಕೋಮಲ್ ಸಿಂಗ್ ರಜಪೂತ್ ಅವರು ಇಂದು ತೀರ್ಪು ಪ್ರಕಟಿಸಿದರು.
Bullibai case

Bullibai case

ಮುಸ್ಲಿಂ ಮಹಿಳೆಯರನ್ನು ಅವಹೇಳನಕಾರಿಯಾಗಿ ಬಿಂಬಿಸುತ್ತಿದ್ದ ಬುಲ್ಲಿ ಬಾಯ್ ಪ್ರಕರಣದ ಆರೋಪಿಗಳಾದ ವಿಶಾಲ್ ಝಾ, ಮಯಾಂಕ್ ರಾವತ್ ಮತ್ತು ಶ್ವೇತಾ ಸಿಂಗ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಮುಂಬೈ ನ್ಯಾಯಾಲಯ ಗುರುವಾರ ತಿರಸ್ಕರಿಸಿದೆ.

Also Read
ಬುಲ್ಲಿ ಬಾಯ್‌ ಪ್ರಕರಣ: ಕ್ರಮಕ್ಕೆ ಆಗ್ರಹಿಸಿ ಸಿಜೆಐ ಎನ್‌ ವಿ ರಮಣ ಅವರಿಗೆ ಪತ್ರ ಬರೆದ ಮಹಿಳಾ ವಕೀಲೆಯರು

ಜನವರಿ 18, 2022 ರಂದು ತೀರ್ಪನ್ನು ಕಾಯ್ದಿರಿಸಿದ ನಂತರ ಬಾಂದ್ರಾದ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಕೋಮಲ್‌ ಸಿಂಗ್‌ ರಜಪೂತ್‌ ಇಂದು ತೀರ್ಪು ಪ್ರಕಟಿಸಿದರು.

Also Read
ಬುಲ್ಲಿ ಬಾಯ್‌ ಪ್ರಕರಣ: ಆರೋಪಿ ಮಯಾಂಕ್‌ ರಾವತ್‌ಗೆ ಕೋವಿಡ್‌ ಸೋಂಕು; ಕಪಾಳ ಮೋಕ್ಷ ಮಾಡಿದರು ಎಂದ ಶ್ವೇತಾ ಸಿಂಗ್‌

ತಾವು ಯಾವುದೇ ಅಪರಾಧ ಮಾಡಿಲ್ಲ ಮತ್ತು ಕ್ರಿಮಿನಲ್‌ ಹಿನ್ನೆಲೆಯೇ ಇಲ್ಲದ ನಮ್ಮನ್ನು ತಪ್ಪಾಗಿ ಪ್ರಕರಣದಲ್ಲಿ ಸಿಲುಕಿಸಲಾಗಿದೆ. ಅಲ್ಲದೆ ತಾವು ಯಾವುದೇ ಮೊಬೈಲ್ ಅಪ್ಲಿಕೇಶನ್‌ಗಳನ್ನು ರೂಪಿಸಿಲ್ಲ ಅಥವಾ ಪ್ರಕರಣದ ಇತರ ಆರೋಪಿಗಳೊಂದಿಗೆ ಸಂಪರ್ಕ ಹೊಂದಿಲ್ಲ ಎಂದು ಆರೋಪಿಗಳಾದ ಬೆಂಗಳೂರು ಮೂಲದ ವಿದ್ಯಾರ್ಥಿ ವಿಶಾಲ್ ಝಾ, ಉತ್ತರಾಖಂಡ ನಿವಾಸಿಗಳಾದ ಶ್ವೇತಾ ಸಿಂಗ್ ಹಾಗೂ ಮಯಾಂಕ್ ರಾವತ್ ತಮ್ಮ ಅರ್ಜಿಯಲ್ಲಿ ತಿಳಿಸಿದ್ದರು.

Also Read
[ಬುಲ್ಲಿ ಬಾಯ್‌ ಪ್ರಕರಣ] ಆರೋಪಿಗಳಾದ ಶ್ವೇತಾ ಸಿಂಗ್‌, ಮಯಾಂಕ್‌ ರಾವತ್‌ ಜ.10ರವರೆಗೆ ಪೊಲೀಸ್‌ ಕಸ್ಟಡಿಗೆ

ತನಿಖಾಧಿಕಾರಿಗಳಿಗೆ ತಮ್ಮ ಎಲ್ಲಾ ಎಲೆಕ್ಟ್ರಾನಿಕ್‌ ಸಾಧನಗಳನ್ನು ಒಪ್ಪಿಸಲಾಗಿದೆ. ತನಿಖೆಗೆ ಸಹಕರಿಸುತ್ತಿದ್ದು ಸಾಕ್ಷ್ಯ ಹಾಳು ಮಾಡಿಲ್ಲ ಎಂದು ಆರೋಪಿಗಳು ಹೇಳಿದ್ದರು. ಮಾತ್ರವಲ್ಲದೆ, ತಮಗೆ ಕೋವಿಡ್‌ ಸೋಂಕು ತಗುಲಿದ್ದು ಕ್ವಾರಂಟೈನ್‌ನಲ್ಲಿರುವುದಾಗಿ ಆರೋಪಿಗಳಾದ ವಿಶಾಲ್‌ ಮತ್ತು ಮಯಾಂಕ್‌ ಅವರು ವಿವರಿಸಿದ್ದರು.

Related Stories

No stories found.
Kannada Bar & Bench
kannada.barandbench.com