[ಪರಿಷತ್‌ ಚುನಾವಣೆ] ಬೆಂಗಳೂರು ನಗರ ಕ್ಷೇತ್ರದ ಫಲಿತಾಂಶಕ್ಕೆ ಹೈಕೋರ್ಟ್‌ ತಡೆ ಪ್ರಶ್ನಿಸಿ ಚುನಾವಣಾ ಆಯೋಗದ ಮೇಲ್ಮನವಿ

ನ್ಯಾ. ಎಂ ನಾಗಪ್ರಸನ್ನ ನೇತೃತ್ವದ ಏಕಸದಸ್ಯ ಪೀಠವು ಡಿ. 9ರಂದು ಹೊರಡಿಸಿರುವ ಆದೇಶದ ವಿರುದ್ಧ ಕೇಂದ್ರ ಚುನಾವಣಾ ಆಯೋಗವು ವಿಭಾಗೀಯ ಪೀಠದ ಮುಂದೆ ಮೇಲ್ಮನವಿ ಸಲ್ಲಿಸಿದೆ.
Karnataka HC and election
Karnataka HC and election

ವಿಧಾನ ಪರಿಷತ್ತಿನ ಬೆಂಗಳೂರು ನಗರ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ಚುನಾವಣೆಯ ಫಲಿತಾಂಶವನ್ನು ನ್ಯಾಯಾಲಯದ ಅನುಮತಿ ಪಡೆಯದೇ ಪ್ರಕಟಿಸಬಾರದು ಎಂದು ನ್ಯಾ. ಎಂ ನಾಗಪ್ರಸನ್ನ ನೇತೃತ್ವದ ಏಕಸದಸ್ಯ ಪೀಠವು ಡಿ. 9ರಂದು ಹೊರಡಿಸಿರುವ ಆದೇಶದ ವಿರುದ್ಧ ಕೇಂದ್ರ ಚುನಾವಣಾ ಆಯೋಗವು (ಇಸಿಐ) ಶುಕ್ರವಾರ ಕರ್ನಾಟಕ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದೆ.

ತಕಾರರು ಮನವಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಿತುರಾಜ್‌ ಅವಸ್ಥಿ ಮತ್ತು ನ್ಯಾಯಮೂರ್ತಿ ಸಚಿನ್‌ ಶಂಕರ್‌ ಮಗದುಮ್‌ ನೇತೃತ್ವದ ವಿಭಾಗೀಯ ಪೀಠವು “ಏಕ ಸದಸ್ಯ ಪೀಠದ ಆದೇಶದಿಂದ ಚುನಾವಣೆಗೆ ಅಡ್ಡಿ ಆಗಿಲ್ಲ. ನಿಗದಿಯಂತೆ ಚುನಾವಣೆ ನಡೆದಿದೆ. ಮತ ಎಣಿಕೆ ಡಿಸೆಂಬರ್‌ 14ರಂದು ನಡೆಯಲಿದೆ. ಡಿಸೆಂಬರ್‌ 13ರಂದು ಮೇಲ್ಮನವಿ ವಿಚಾರಣೆ ನಡೆಸಲಾಗುವುದು” ಎಂದಿತು.

ವಿಭಾಗೀಯ ಪೀಠವು ಶುಕ್ರವಾರ ಕಲಾಪ ಆರಂಭಿಸುತ್ತಿದ್ದಂತೆ ಕೇಂದ್ರ ಚುನಾವಣಾ ಆಯೋಗದ ಪರವಾಗಿ ಹೆಚ್ಚುವರಿ ಅಡ್ವೊಕೇಟ್‌ಜನರಲ್ ಧ್ಯಾನ್‌ ಚಿನ್ನಪ್ಪ ಅವರು ತುಂಬಾ ತುರ್ತು ಇರುವ ಹಿನ್ನೆಲೆಯಲ್ಲಿ ಮೇಲ್ಮನವಿಯನ್ನು ಇಂದೇ (ಶುಕ್ರವಾರ) ವಿಚಾರಣೆಗೆ ಪರಿಗಣಿಸಬೇಕು” ಎಂದು ಕೋರಿದರು.

Also Read
[ವಿಧಾನ ಪರಿಷತ್‌ ಚುನಾವಣೆ] ಸೂರಜ್‌ ರೇವಣ್ಣ ಉಮೇದುವಾರಿಕೆ ಪ್ರಶ್ನೆ: ಹೈಕೋರ್ಟ್‌ನಿಂದ ಚುನಾವಣಾ ಆಯೋಗಕ್ಕೆ ನೋಟಿಸ್‌

“ವಿಧಾನ ಪರಿಷತ್‌ನ ಬೆಂಗಳೂರು ನಗರ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ನಾಮನಿರ್ದೇಶಿತ ಸದಸ್ಯರ ಮತದಾನದ ಹಕ್ಕಿನ ವಿಚಾರವಾಗಿ ಸಲ್ಲಿಸಲಾಗಿದ್ದ ಚುನಾವಣಾ ತಕರಾರು ಅರ್ಜಿಯಲ್ಲಿ ನಾಮನಿರ್ದೇಶಿತ ಸದಸ್ಯರಿಗೆ ಮತದಾನದಕ್ಕೆ ಅವಕಾಶ ಮಾಡಿಕೊಟ್ಟಿರುವ ಏಕಸದಸ್ಯ ಪೀಠವು ನ್ಯಾಯಾಲಯದ ಅನುಮತಿ ಇಲ್ಲದೇ ಫಲಿತಾಂಶ ಪ್ರಕಟಿಸಬಾರದು ಎಂದಿದೆ. ಮತದಾನಕ್ಕೆ ಒಂದು ದಿನ ಬಾಕಿ ಇರುವಾಗ ಈ ತೀರ್ಪು ನೀಡಲಾಗಿದೆ. ಉಳಿದ ಕ್ಷೇತ್ರಗಳ ಫಲಿತಾಂಶದ ವಿಚಾರದಲ್ಲೂ ಇದೇ ಆದೇಶ ಪಾಲಿಸುವಂತೆ ಕೆಲ ರಾಜಕೀಯ ಪಕ್ಷಗಳು ಚುನಾವಣಾ ಆಯೋಗಕ್ಕೆ ಮನವಿ ಸಲ್ಲಿಸಿವೆ. ಈ ರೀತಿ ಆದರೆ, ನಿಗದಿತ ಚುನಾವಣಾ ವೇಳಾಪಟ್ಟಿಯಲ್ಲಿ ಹಸ್ತಕ್ಷೇಪ ಮಾಡಿದಂತಾಗುತ್ತದೆ. ಡಿಸೆಂಬರ್‌ 14ರಂದು ಮತ ಎಣಿಕೆ ನಡೆಯಲಿದ್ದು, ಅದೇ ದಿನ ಫಲಿತಾಂಶ ಪ್ರಕಟಿಸಬೇಕಾಗಿದೆ” ಎಂದು ಪೀಠದ ಗಮನ ಸೆಳೆದಿದ್ದರು.

Related Stories

No stories found.
Kannada Bar & Bench
kannada.barandbench.com