ದೆಹಲಿ, ಕಾಶ್ಮೀರ, ಕೇರಳ ಸೇರಿದಂತೆ ಎಂಟು ಹೈಕೋರ್ಟ್ ಸಿಜೆಗಳ ನೇಮಕಾತಿಗೆ ಕೇಂದ್ರದ ಅಧಿಸೂಚನೆ

ಕೇಂದ್ರ ಕಾನೂನು ಸಚಿವ (ಸ್ವತಂತ್ರ ಉಸ್ತುವಾರಿ) ಅರ್ಜುನ್ ರಾಮ್ ಮೇಘವಾಲ್ ಅವರು ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ಈ ಬೆಳವಣಿಗೆಯನ್ನು ಟ್ವೀಟ್ ಮಾಡಿದ್ದಾರೆ.
ದೆಹಲಿ, ಕಾಶ್ಮೀರ, ಕೇರಳ ಸೇರಿದಂತೆ ಎಂಟು ಹೈಕೋರ್ಟ್ ಸಿಜೆಗಳ ನೇಮಕಾತಿಗೆ ಕೇಂದ್ರದ ಅಧಿಸೂಚನೆ
Published on

ಎಂಟು ಹೈಕೋರ್ಟ್‌ಗಳಿಗೆ ಮುಖ್ಯ ನ್ಯಾಯಮೂರ್ತಿಗಳ ನೇಮಕಾತಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಶನಿವಾರ ಅಧಿಸೂಚನೆ ಹೊರಡಿಸಿದೆ.

ಮುಖ್ಯ ನ್ಯಾಯಮೂರ್ತಿಗಳಾಗಿ ನೇಮಕಗೊಂಡವರು:

  • ಪ್ರಸ್ತುತ ದೆಹಲಿ ಹೈಕೋರ್ಟ್‌ನ ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಗಿ ಕಾರ್ಯನಿರ್ವಹಿಸುತ್ತಿರುವ  ಮನಮೋಹನ್‌ ಅವರನ್ನು ದೆಹಲಿ ಹೈಕೋರ್ಟ್‌ನ ಸಾಮಾನ್ಯ ಮುಖ್ಯ ನ್ಯಾಯಮೂರ್ತಿಯಾಗಿ ನೇಮಿಸಲಾಗಿದೆ.

  • ದೆಹಲಿ ಹೈಕೋರ್ಟ್‌ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ನ್ಯಾಯಮೂರ್ತಿ ರಾಜೀವ್ ಶಕ್ಧರ್ (ದೆಹಲಿ ಹೈಕೋರ್ಟ್) ಹಿಮಾಚಲ ಪ್ರದೇಶ ಹೈಕೋರ್ಟ್‌  ಮುಖ್ಯ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದಾರೆ.

  • ದೆಹಲಿ ಹೈಕೋರ್ಟ್ನಲ್ಲಿ ಸೇವೆ ಸಲ್ಲಿಸುತ್ತಿದ್ದ ನ್ಯಾಯಮೂರ್ತಿ ಸುರೇಶ್ ಕೈಟ್‌ ಅವರನ್ನು ಮಧ್ಯಪ್ರದೇಶ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಲಾಗಿದೆ.

  • ಕಲ್ಕತ್ತಾ ಹೈಕೋರ್ಟ್‌ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ನ್ಯಾಯಮೂರ್ತಿ ಇಂದ್ರ ಪ್ರಸನ್ನ ಮುಖರ್ಜಿ ಅವರನ್ನು ಮೇಘಾಲಯ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಿಸಲಾಗಿದೆ.

  • ಬಾಂಬೆ ಹೈಕೋರ್ಟ್‌  ನ್ಯಾಯಮೂರ್ತಿ ನಿತಿನ್ ಮಧುಕರ್ ಜಾಮ್ದಾರ್‌ ಅವರು ಕೇರಳ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದಾರೆ.

  • ಪ್ರಸ್ತುತ ಜಮ್ಮು ಕಾಶ್ಮೀರ ಹಾಗೂ ಲಡಾಖ್‌ ಹೈಕೋರ್ಟ್‌ನ ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಗಿ ಕಾರ್ಯನಿರ್ವಹಿಸುತ್ತಿರುವ ತಾಶಿ ರಬ್ಸ್ತಾನ್ ಅವರನ್ನು ಅದೇ ಹೈಕೋರ್ಟ್‌ನ ಸಾಮಾನ್ಯ ಮುಖ್ಯ ನ್ಯಾಯಮೂರ್ತಿಯಾಗಿ ನೇಮಿಸಲಾಗಿದೆ.

  • ಬಾಂಬೆ ಹೈಕೋರ್ಟ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದ ನ್ಯಾಯಮೂರ್ತಿ ಶ್ರೀರಾಮ್ ಕಲ್ಪತಿ ರಾಜೇಂದ್ರನ್ ಅವರು ಮದ್ರಾಸ್ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕವಾಗಿದ್ದಾರೆ.

  • ಹಿಮಾಚಲ ಪ್ರದೇಶ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಎಂ ಎಸ್ ರಾಮಚಂದ್ರ ರಾವ್ ಜಾರ್ಖಂಡ್ ಹೈಕೋರ್ಟ್‌ಗೆ ವರ್ಗಾವಣೆಗೊಂಡಿದ್ದಾರೆ.

ಕೇಂದ್ರ ಕಾನೂನು ಸಚಿವ (ಸ್ವತಂತ್ರ ಉಸ್ತುವಾರಿ) ಅರ್ಜುನ್ ರಾಮ್ ಮೇಘವಾಲ್ ಅವರು ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ಈ ಬೆಳವಣಿಗೆಯನ್ನು ಟ್ವೀಟ್ ಮಾಡಿದ್ದಾರೆ.

Kannada Bar & Bench
kannada.barandbench.com