Chaitra Kundapur, Halashri Swamiji
Chaitra Kundapur, Halashri Swamiji

ಚೈತ್ರಾ ವಂಚನೆ ಪ್ರಕರಣ: ಹಾಲಶ್ರೀ ಜಾಮೀನು ಅರ್ಜಿ ವಜಾ ಮಾಡಿದ ಬೆಂಗಳೂರಿನ ಸತ್ರ ನ್ಯಾಯಾಲಯ

ದೂರುದಾರರಿಂದ ರೂ.1.50 ಕೋಟಿ ಹಣ ಪಡೆದ ಆರೋಪ ಎದುರಿಸುತ್ತಿರುವ ಸ್ವಾಮೀಜಿಯನ್ನು ಸೆಪ್ಟೆಂಬರ್‌ 19ರಂದು ಸಿಸಿಬಿ ಪೊಲೀಸರು ಒಡಿಶಾದ ಕಟಕ್‌ನಲ್ಲಿ ಬಂಧಿಸಿದ್ದರು.

ಉದ್ಯಮಿಯೊಬ್ಬರಿಗೆ ಬಿಜೆಪಿ ಟಿಕೆಟ್‌ ಕೊಡಿಸುವುದಾಗಿ ನಂಬಿಸಿ ವಂಚಿಸಿದ್ದ ಪ್ರಕರಣದ ಮೂರನೇ ಆರೋಪಿ ವಿಜಯನಗರ ಜಿಲ್ಲೆ ಹಿರೇಹಡಗಲಿ ಹಾಲಸ್ವಾಮಿ ಮಠದ ಅಭಿನವ ಹಾಲಶ್ರೀ ಸ್ವಾಮೀಜಿ ಸಲ್ಲಿಸಿರುವ ಜಾಮೀನು ಅರ್ಜಿಯನ್ನು ಬೆಂಗಳೂರಿನ ನ್ಯಾಯಾಲಯವು ಸೋಮವಾರ ವಜಾ ಮಾಡಿದೆ.

ಹಾಲಶ್ರೀ ಸ್ವಾಮೀಜಿ ಸಲ್ಲಿಸಿದ್ದ ಜಾಮೀನು ಅರ್ಜಿಯ ಆದೇಶವನ್ನು ಅಕ್ಟೋಬರ್‌ 11ರಂದು ಕಾಯ್ದಿರಿಸಿದ್ದ ಬೆಂಗಳೂರಿನ 57ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸತ್ರ ನ್ಯಾಯಾಧೀಶರಾದ ಟಿ ಗೋವಿಂದಯ್ಯ ಅವರು ಇಂದು ಅರ್ಜಿಯನ್ನು ವಜಾ ಮಾಡಿದರು. ವಿಸ್ತೃತ ಆದೇಶ ಇನ್ನಷ್ಟೇ ಪ್ರಕಟವಾಗಬೇಕಿದೆ.

ಉಡುಪಿ ಜಿಲ್ಲೆಯ ಬೈಂದೂರು ಕ್ಷೇತ್ರದಿಂದ ಸ್ಪರ್ಧಿಸಲು ಗೋವಿಂದ ಬಾಬು ಪೂಜಾರಿ ಅವರಿಗೆ ಟಿಕೆಟ್‌ ಕೊಡಿಸುವುದಾಗಿ ನಂಬಿಸಿ ಅವರಿಂದ ಐದು ಕೋಟಿ ರೂಪಾಯಿ ಹಣ ಪಡೆದಿದ್ದಾರೆ ಎಂದು ಆರೋಪಿಸಿ ಪೊಲೀಸರಿಗೆ ದೂರು ನೀಡಲಾಗಿತ್ತು. ಪ್ರಕರಣದ ಆರೋಪಿಗಳಾದ ಹಿಂದೂ ಕಾರ್ಯಕರ್ತೆ ಚೈತ್ರಾ, ಶ್ರೀಕಾಂತ್‌, ರಮೇಶ್‌, ಗಗನ್‌, ಪ್ರಜ್ವಲ್‌ ಹಾಗೂ ಧನರಾಜ್‌ ಅವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು.

Also Read
ಚೈತ್ರಾ ವಂಚನೆ ಪ್ರಕರಣ: ಹಾಲಶ್ರೀ ಜಾಮೀನು ಆದೇಶವನ್ನು ಅ.16ಕ್ಕೆ ಕಾಯ್ದಿರಿಸಿದ ಬೆಂಗಳೂರಿನ ಸತ್ರ ನ್ಯಾಯಾಲಯ

ಇತ್ತ ಪ್ರಕರಣದ ಮೂರನೇ ಆರೋಪಿ, ದೂರುದಾರರಿಂದ ರೂ.1.50 ಕೋಟಿ ಹಣ ಪಡೆದ ಆರೋಪ ಎದುರಿಸುತ್ತಿರುವ ಸ್ವಾಮೀಜಿಯನ್ನು ಸೆಪ್ಟೆಂಬರ್‌ 19ರಂದು ಸಿಸಿಬಿ ಪೊಲೀಸರು ಒಡಿಶಾದ ಕಟಕ್‌ನಲ್ಲಿ ಬಂಧಿಸಿದ್ದರು. ಇದಕ್ಕೂ ಮುನ್ನ, ಹಾಲಶ್ರೀ ಸ್ವಾಮೀಜಿ ಅವರು ಅಜ್ಞಾತ ಸ್ಥಳದಲ್ಲಿದ್ದುಕೊಂಡೇ ನಿರೀಕ್ಷಣಾ ಜಾಮೀನು ಕೋರಿದ್ದನ್ನು ಇಲ್ಲಿ ನೆನೆಯಬಹುದು.

Related Stories

No stories found.
Kannada Bar & Bench
kannada.barandbench.com