ಎನ್ಎಸ್ಇ ವಂಚನೆ ಪ್ರಕರಣ: ಚಿತ್ರಾ ರಾಮಕೃಷ್ಣಗೆ ಜಾಮೀನು ನಿರಾಕರಿಸಿದ ದೆಹಲಿ ನ್ಯಾಯಾಲಯ [ಚುಟುಕು]

ಎನ್ಎಸ್ಇ ವಂಚನೆ ಪ್ರಕರಣ: ಚಿತ್ರಾ ರಾಮಕೃಷ್ಣಗೆ ಜಾಮೀನು ನಿರಾಕರಿಸಿದ ದೆಹಲಿ ನ್ಯಾಯಾಲಯ [ಚುಟುಕು]

ರಾಷ್ಟ್ರೀಯ ಷೇರು ವಿನಿಮಯ ಕೇಂದ್ರದ (ಎನ್‌ಎಸ್‌ಇ) ಮಾಜಿ ಉದ್ಯೋಗಿ ಆನಂದ್‌ ಸುಬ್ರಮಣಿಯನ್‌ ಅವರ ಹುದ್ದೆ ಮತ್ತು ವೇತನವನ್ನು ಕಾಲಕಾಲಕ್ಕೆ ಹೆಚ್ಚಿಸಿದ ಆರೋಪದ ಮೇಲೆ ಬಂಧಿತರಾಗಿರುವ ಎನ್‌ಎಸ್‌ಇ ಮಾಜಿ ಮುಖ್ಯಸ್ಥೆ ಚಿತ್ರಾ ರಾಮಕೃಷ್ಣಗೆ ಜಾಮೀನು ನೀಡಲು ಸಿಬಿಐ ವಿಶೇಷ ನ್ಯಾಯಾಲಯ ನಿರಾಕರಿಸಿದೆ. [ಸಿಬಿಐ ಮತ್ತು ಸಂಜಯ್‌ ಗುಪ್ತಾ ಮತ್ತಿತರರ ನಡುವಣ ಪ್ರಕರಣ].

ಚಿತ್ರಾ ಮತ್ತು ಆನಂದ್‌ ಸುಬ್ರಮಣಿಯನ್‌ ಅವರ ಪರ ವಕೀಲರ ವಾದ ಆಲಿಸಿದ ನಂತರ ವಿಶೇಷ ನ್ಯಾಯಾಧೀಶ ಸಂಜೀವ್‌ ಅಗರ್‌ವಾಲ್‌ ಜಾಮೀನು ಅರ್ಜಿ ನಿರಾಕರಿಸಿದರು. ಇನ್ನಷ್ಟೇ ಆದೇಶದ ಪ್ರತಿ ಲಭ್ಯವಾಗಬೇಕಿದೆ.

ಹೆಚ್ಚಿನ ಮಾಹಿತಿಗೆ ʼಬಾರ್‌ ಅಂಡ್‌ ಬೆಂಚ್‌ʼ ಇಂಗ್ಲಿಷ್‌ ತಾಣದ ಲಿಂಕ್‌ ಗಮನಿಸಿ.

Related Stories

No stories found.
Kannada Bar & Bench
kannada.barandbench.com