ಕೇಜ್ರಿವಾಲ್ ವಿರೋಧದ ನಡುವೆಯೂ ಜಾಮೀನು ಅರ್ಜಿ ವಿಚಾರಣೆ ಮುಂದೂಡಿದ ದೆಹಲಿ ಹೈಕೋರ್ಟ್

ಈ ಹಿಂದೆ ವಿಚಾರಣಾ ನ್ಯಾಯಾಲಯ ಕೇಜ್ರಿವಾಲ್ ಅವರಿಗೆ ನೀಡಿದ್ದ ಜಾಮೀನು ಆದೇಶ ಪ್ರಶ್ನಿಸಿ ಜಾರಿ ನಿರ್ದೇಶನಾಲಯ (ಇ ಡಿ) ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ ಹೈಕೋರ್ಟ್ ವಿಚಾರಣಾ ನ್ಯಾಯಾಲಯದ ಆದೇಶಕ್ಕೆ ತಡೆ ನೀಡಿತ್ತು.
Arvind Kejriwal, ED and Delhi High Court
Arvind Kejriwal, ED and Delhi High Court
Published on

ದೆಹಲಿ ಅಬಕಾರಿ ನೀತಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಾನು ಸಲ್ಲಿಸಿರುವ ಜಾಮೀನು ಅರ್ಜಿಯನ್ನು ತುರ್ತು ಆಧಾರದ ಮೇಲೆ ವಿಚಾರಣೆ ನಡೆಸುವಂತೆ ಅರವಿಂದ್ ಕೇಜ್ರಿವಾಲ್ ಸಲ್ಲಿಸಿದ್ದ ಮನವಿಯನ್ನು ದೆಹಲಿ ಹೈಕೋರ್ಟ್ ಬುಧವಾರ ತಿರಸ್ಕರಿಸಿದೆ.

ಈ ಹಿಂದೆ ವಿಚಾರಣಾ ನ್ಯಾಯಾಲಯ ಕೇಜ್ರಿವಾಲ್ ಅವರಿಗೆ ನೀಡಿದ್ದ ಜಾಮೀನು ಆದೇಶ  ಪ್ರಶ್ನಿಸಿ ಜಾರಿ ನಿರ್ದೇಶನಾಲಯ (ಇ ಡಿ) ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ ಹೈಕೋರ್ಟ್  ವಿಚಾರಣಾ ನ್ಯಾಯಾಲಯದ ಆದೇಶಕ್ಕೆ ತಡೆ ನೀಡಿತ್ತು.

Also Read
ಕೇಜ್ರಿವಾಲ್, ಎಎಪಿ ವಿರುದ್ಧ ಇ ಡಿ ಸಲ್ಲಿಸಿದ್ದ ಆರೋಪಪಟ್ಟಿ ಗಣನೆಗೆ ತೆಗೆದುಕೊಂಡ ದೆಹಲಿ ನ್ಯಾಯಾಲಯ

ಇ ಡಿ ಮನವಿಗೆ ಸಂಬಂಧಿಸಿದಂತೆ ಕೇಜ್ರಿವಾಲ್ ಅವರು ನೀಡಿದ್ದ ಪ್ರತಿಕ್ರಿಯೆಯ ಪ್ರತಿ ತಮಗೆ ನಿನ್ನೆ ತರಡರಾತ್ರಿ ದೊರೆತಿದೆ. ಹೀಗಾಗಿ ಪ್ರತ್ಯುತ್ತರ (ರಿಜಾಯಿಂಡರ್‌) ಅರ್ಜಿ ಸಲ್ಲಿಸಲು ಇ ಡಿಗೆ ಸಮಯ ಬೇಕಾಗುತ್ತದೆ ಎಂದು ಹೆಚ್ಚುವರಿ ಸಾಲಿಸಿಟರ್ ಜನರಲ್ (ಎಎಸ್‌ಜಿ) ಎಸ್‌ ವಿ ರಾಜು  ವಾದ ಮಂಡಿಸಿದರು. ಈ ಹಿನ್ನೆಲೆಯಲ್ಲಿ ಹೈಕೋರ್ಟ್‌ನ್ಯಾಯಮೂರ್ತಿ ನೀನಾ ಬನ್ಸಾಲ್ ಕೃಷ್ಣ ಅವರು ಪ್ರಕರಣದ ವಿಚಾರಣೆಯನ್ನು ಜುಲೈ 15ಕ್ಕೆ  ಮುಂದೂಡಿದರು.

ಕೇಜ್ರಿವಾಲ್ ಪರ ವಾದ ಮಂಡಿಸಿದ ಹಿರಿಯ ವಕೀಲ ಡಾ.ಅಭಿಷೇಕ್ ಮನು ಸಿಂಘ್ವಿ  ಅವರು ಇ ಡಿ ವಾದವನ್ನು ಪ್ರಶ್ನಿಸಿದರು.ಕೇಜ್ರಿವಾಲ್‌ ಪ್ರತಿಕ್ರಿಯೆ ನೀಡಿರುವ ಪ್ರತಿಯನ್ನು ಮಂಗಳವಾರ ಮಧ್ಯಾಹ್ನ 1 ಗಂಟೆಗೆ ತನಿಖಾ ಕಚೇರಿಗೆ (ಐಒ) ಮೇಲ್ ಮಾಡಲಾಗಿದೆ ಎಂದು ಸಿಂಘ್ವಿ ಹೇಳಿದರು.

Also Read
ಕೇಜ್ರಿವಾಲ್‌ ಜಾಮೀನು ಕೋರಿಕೆ: ಸಿಬಿಐ ಪ್ರತಿಕ್ರಿಯೆ ಕೇಳಿದ ದೆಹಲಿ ಹೈಕೋರ್ಟ್‌

ಕೇಜ್ರಿವಾಲ್‌ ಅವರಿಗೆ ನೀಡಲಾಗಿದ್ದ ಜಾಮೀನಿಗೆ ಹೈಕೋರ್ಟ್ ತಡೆಯಾಜ್ಞೆ ನೀಡಿರುವುದರಿಂದ ಪ್ರಕರಣವನ್ನು ತುರ್ತಾಗಿ ವಿಚಾರಣೆ ನಡೆಸುವ ಅಗತ್ಯವಿದೆ ಎಂದು ಸಿಂಘ್ವಿ ಪ್ರತಿಪಾದಿಸಿದರು. ಪ್ರತಿ-ಅಫಿಡವಿಟ್‌ ಅವಲಂಬಿಸದೆ ಪ್ರಕರಣದಲ್ಲಿ ವಾದ ಮಂಡಿಸಲು ಸಿದ್ಧ ಎಂಬುದಾಗಿಯೂ ಅವರು ಹೇಳಿದರು.

ಆದರೆ, ಕೇಜ್ರಿವಾಲ್ ಅವರ ಉತ್ತರಕ್ಕೆ ಮರುಪ್ರತಿಕ್ರಿಯೆ ಸಲ್ಲಿಸಲು ಇ ಡಿಗೆ ಅರ್ಹತೆ ಇದೆ ಎಂದು ಹೇಳಿದ ನ್ಯಾಯಮೂರ್ತಿ ಕೃಷ್ಣ ವಿಚಾರಣೆಯನ್ನು ಮುಂದೂಡಿದರು.

ಕೇಜ್ರಿವಾಲ್ ನ್ಯಾಯಾಲಯಕ್ಕೆ ಸಲ್ಲಿಸಿರುವ ತಮ್ಮ 30 ಪುಟಗಳ ಪ್ರತಿಕ್ರಿಯೆಯಲ್ಲಿ, ತಮಗೆ ಜಾಮೀನು ಮಂಜೂರು ಮಾಡಿದ ವಿಶೇಷ ನ್ಯಾಯಾಧೀಶೆ (ಪಿಸಿ ಆಕ್ಟ್) ನಿಯಾಯ್‌ ಬಿಂದು ವಿರುದ್ಧದ ಇ ಡಿ ಆರೋಪಗಳನ್ನು ನ್ಯಾಯಾಲಯ ತಿರಸ್ಕರಿಸಬೇಕು ಎಂದು ತಿಳಿಸಿದ್ದಾರೆ.

"ನ್ಯಾಯಾದೀಶರ ಬಗ್ಗೆ ಇ ಡಿ ಬಳಸಿರುವ ಭಾಷೆಯನ್ನು ಈ ಗೌರವಾನ್ವಿತ ನ್ಯಾಯಾಲಯವು ತಿರಸ್ಕರಿಸಬೇಕು. ಈ ಬಗೆಯ ಟೀಕೆಗಳು, ಆರೋಪಗಳು ನ್ಯಾಯದಾನಕ್ಕೆ ತೊಡಕಾಗುವುದು ಮಾತ್ರವೇ ಅಲ್ಲದೆ ಜಿಲ್ಲಾ ನ್ಯಾಯಾಂಗದ ಸ್ಥೈರ್ಯಗೆಡಿಸುತ್ತದೆ" ಎಂದು ಕೇಜ್ರಿವಾಲ್‌ ತಮ್ಮ ಪ್ರತಿಕ್ರಿಯೆಯಲ್ಲಿ ತಿಳಿಸಿದ್ದಾರೆ.

Kannada Bar & Bench
kannada.barandbench.com