ರೈತರ ಪ್ರತಿಭಟನೆ: ಹೆದ್ದಾರಿ ತಡೆಯದಂತೆ ರೈತ ನಾಯಕ ಜಗಜಿತ್ ಸಿಂಗ್ ದಲ್ಲೆವಾಲ್‌ಗೆ ಸುಪ್ರೀಂ ಕೋರ್ಟ್ ಸೂಚನೆ

ಪ್ರಜಾಪ್ರಭುತ್ವದಲ್ಲಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುವುದು ಹಕ್ಕಾಗಿದ್ದರೂ, ಅಂತಹ ಪ್ರತಿಭಟನೆಗಳಲ್ಲಿ ಪಾಲ್ಗೊಳ್ಳುವಾಗ ಜವಾಬ್ದಾರಿಯ ಅರಿವು ಇರಬೇಕು ಎಂದು ಅದು ಹೇಳಿದೆ.
Farmers protest, Delhi-Haryana border, Ghazipur
Farmers protest, Delhi-Haryana border, Ghazipur
Published on

ಕೃಷಿ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ಕೇಂದ್ರ ಸರ್ಕಾರದ ವಿರುದ್ಧದ ನಡೆಸುತ್ತಿರುವ ಪ್ರತಿಭಟನೆಯ ವೇಳೆ ಹೆದ್ದಾರಿಗಳನ್ನು ತಡೆಯದಂತೆ ಅಥವಾ ಸಾರ್ವಜನಿಕರಿಗೆ ಅನಾನುಕೂಲತೆ ಉಂಟುಮಾಡದಂತೆ ಪ್ರತಿಭಟನಾನಿರತ ರೈತ ನಾಯಕ ಜಗಜಿತ್ ಸಿಂಗ್ ದಲ್ಲೆವಾಲ್ ಅವರಿಗೆ ಸುಪ್ರೀಂ ಕೋರ್ಟ್ ಸೋಮವಾರ ತಿಳಿಸಿದೆ.

ಅವರ ಅಕ್ರಮ ಬಂಧನಕ್ಕೆ ಸಂಬಂಧಿಸಿದ ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ವಿಲೇವಾರಿ ಮಾಡುವಾಗ ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಉಜ್ಜಲ್ ಭುಯಾನ್ ಅವರಿದ್ದ ಪೀಠ ಈ ಆದೇಶ ನೀಡಿದೆ.

Also Read
ಚರ್ಚೆಯೇ ಇಲ್ಲದೆ ಕೃಷಿ ಕಾಯಿದೆ ರದ್ದತಿ ಮಸೂದೆ ಅಂಗೀಕರಿಸಿದ ಲೋಕಸಭೆ

ಪ್ರಜಾಪ್ರಭುತ್ವದಲ್ಲಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುವುದು ಹಕ್ಕಾಗಿದ್ದರೂ, ಅಂತಹ ಪ್ರತಿಭಟನೆಗಳಲ್ಲಿ ಪಾಲ್ಗೊಳ್ಳುವಾಗ ಜವಾಬ್ದಾರಿಯ ಅರಿವು ಇರಬೇಕು ಎಂದು ಅದು ಹೇಳಿದೆ.

ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಪಡೆಯುವ ರೈತರ ಕಾನೂನುಬದ್ಧ ಹಕ್ಕನ್ನು ಈಡೇರಿಸುವವರೆಗೆ ಪ್ರತಿಭಟನೆ ಮತ್ತು ಆಮರಣಾಂತ ಉಪವಾಸ ನಡೆಸಲು ಮುಂದಾಗಿದ್ದ ದಲ್ಲೆವಾಲ್ ಅವರನ್ನು ದೆಹಲಿಯ ಖಾನೌರಿ ಗಡಿಯಲ್ಲಿ ಪ್ರತಿಭಟನಾ ಸ್ಥಳದಿಂದ ಹೊರಗೆ ಕಳಿಸಲಾಗಿತ್ತು ಎಂದು ತಿಳಿದು ಬಂದಿದೆ.

Also Read
ರೈತರ ಪ್ರತಿಭಟನೆ ವಿರುದ್ಧ ವಿವಾದಾತ್ಮಕ ಟ್ವೀಟ್: ಎಫ್ಐಆರ್ ರದ್ದುಗೊಳಿಸಲು ಕರ್ನಾಟಕ ಹೈಕೋರ್ಟ್‌ಗೆ ಕಂಗನಾ ಮನವಿ

ತಮ್ಮನ್ನು ಬಲವಂತವಾಗಿ ಲೂಧಿಯಾನಾ ಆಸ್ಪತ್ರೆಗೆ ದಾಖಲಿಸಲಾಗಿದ್ದು ಇದೊಂದು ರೀತಿಯ ಬಂಧನ ಎಂದು ದಲ್ಲೆವಾಲ್‌ ಅವರು ನ್ಯಾಯಾಲಯಕ್ಕೆ ಹೇಬಿಯಸ್‌ ಕಾರ್ಪಸ್‌ ಅರ್ಜಿ ಸಲ್ಲಿಸಿದ್ದರು.

ಆದರೆ ಬಂಧನದಿಂದ ಬಿಡುಗಡೆಗೊಂಡು ಪ್ರತಿಭಟನೆಯಲ್ಲಿ ಅವರು ಮತ್ತೆ ತೊಡಗಿರುವುದನ್ನು ಗಮನಿಸಿದ ನ್ಯಾಯಾಲಯ ಅರ್ಜಿ ವಿಲೇವಾರಿ ಮಾಡಿತು.   

Kannada Bar & Bench
kannada.barandbench.com