Jitendra Tyagi (Waseem Rizvi) and Supreme Court
ಸುದ್ದಿಗಳು
ಹರಿದ್ವಾರ ಧರ್ಮ ಸಂಸದ್ ದ್ವೇಷ ಭಾಷಣ ಪ್ರಕರಣ: ಜಿತೇಂದ್ರ ತ್ಯಾಗಿಗೆ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು [ಚುಟುಕು]
ಹರಿದ್ವಾರದಲ್ಲಿ 2021ರ ಡಿಸೆಂಬರ್ನಲ್ಲಿ ನಡೆದ ಧರ್ಮ ಸಂಸದ್ ವೇಳೆ ದ್ವೇಷ ಭಾಷಣ ಮಾಡಿದ ಆರೋಪದಡಿ ಬಂಧಿರಾಗಿದ್ದ ಜಿತೇಂದ್ರ ತ್ಯಾಗಿಗೆ ಸುಪ್ರೀಂ ಕೋರ್ಟ್ ಮಂಗಳವಾರ ಮಧ್ಯಂತರ ವೈದ್ಯಕೀಯ ಜಾಮೀನು ನೀಡಿದೆ.
ಸಮಾಜದಲ್ಲಿ ಸಾಮರಸ್ಯವನ್ನು ಕದಡುವಂತಹ ಯಾವುದೇ ದ್ವೇಷದ ಭಾಷಣಗಳನ್ನು ತ್ಯಾಗಿ ನೀಡಬಾರದು ಎಂದು ನ್ಯಾಯಮೂರ್ತಿಗಳಾದ ಅಜಯ್ ರಾಸ್ತೋಗಿ ಮತ್ತು ವಿಕ್ರಮ್ ನಾಥ್ ಅವರಿದ್ದ ವಿಭಾಗೀಯ ಪೀಠ ಒತ್ತಿ ಹೇಳಿತು.
ಹೆಚ್ಚಿನ ಮಾಹಿತಿಗೆ ʼಬಾರ್ ಅಂಡ್ ಬೆಂಚ್ʼ ಇಂಗ್ಲಿಷ್ ಜಾಲತಾಣದ ಲಿಂಕ್ ಗಮನಿಸಿ.


