ಸುಪ್ರೀಂ ನ್ಯಾಯಮೂರ್ತಿಗಳಾಗಿ ಅಧಿಕಾರ ಸ್ವೀಕರಿಸಿದ ಉಜ್ಜಲ್ ಭುಯಾನ್, ಎಸ್ ವಿ ಭಟ್ಟಿ: ಸಂಖ್ಯಾಬಲ 32ಕ್ಕೆ ಏರಿಕೆ

ಸುಪ್ರೀಂ ಕೋರ್ಟ್‌ನಲ್ಲಿ ನಡೆದ ಸಮಾರಂಭದಲ್ಲಿ ಸಿಜೆಐ ಡಿ ವೈ ಚಂದ್ರಚೂಡ್ ಅವರು ಈ ಇಬ್ಬರೂ ನ್ಯಾಯಮೂರ್ತಿಗಳಿಗೆ ಪ್ರಮಾಣ ವಚನ ಬೋಧಿಸಿದರು.
Justice Ujjal Bhuyan and Justice SV Bhatti
Justice Ujjal Bhuyan and Justice SV Bhatti

ನ್ಯಾಯಮೂರ್ತಿಗಳಾದ ಉಜ್ಜಲ್ ಭುಯಾನ್ ಮತ್ತು ಎಸ್‌ ವಿ ಭಟ್ಟಿ ಅವರು ಶುಕ್ರವಾರ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದ್ದು, ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳ ಸಂಖ್ಯಾಬಲ  32ಕ್ಕೆ  ಏರಿಕೆಯಾಗಿದೆ.

ಸುಪ್ರೀಂ ಕೋರ್ಟ್‌ನಲ್ಲಿ ನಡೆದ ಸಮಾರಂಭದಲ್ಲಿ ಸಿಜೆಐ ಡಿ ವೈ ಚಂದ್ರಚೂಡ್ ಅವರು ಈ ಇಬ್ಬರು ನ್ಯಾಯಮೂರ್ತಿಗಳಿಗೆ ಪ್ರಮಾಣ ವಚನ ಬೋಧಿಸಿದರು. ಕಾರ್ಯಕ್ರಮದಲ್ಲಿ ವಿವಿಧ ನ್ಯಾಯಮೂರ್ತಿಗಳು ಮತ್ತು ವಕೀಲರ ಸಂಘದ ಸದಸ್ಯರು ಭಾಗವಹಿಸಿದ್ದರು.

Also Read
ಈಚೆಗೆ ಇಬ್ಬರು ನ್ಯಾಯಮೂರ್ತಿಗಳ ತ್ವರಿತ ಪದೋನ್ನತಿಯೇ ಕೊಲಿಜಿಯಂ ಸಕ್ರಿಯ ಎಂಬುದಕ್ಕೆ ಸಾಕ್ಷಿ: ಸಿಜೆಐ ಚಂದ್ರಚೂಡ್‌

ಸುಪ್ರೀಂ ಕೋರ್ಟ್ ಕೊಲಿಜಿಯಂ ಜುಲೈ 5 ರಂದು ಅವರನ್ನು ಸರ್ವೋಚ್ಚ ನ್ಯಾಯಾಲಯಕ್ಕೆ ಪದೋನ್ನತಿಗೊಳಿಸಲು ಶಿಫಾರಸ್ಸು ಮಾಡಿತ್ತು. ಈ ಶಿಫಾರಸ್ಸಿಗೆ ಕೇಂದ್ರ ಸರ್ಕಾರ ಜುಲೈ 12ರಂದು ಒಪ್ಪಿಗೆ ಸೂಚಿಸಿತ್ತು.

Related Stories

No stories found.
Kannada Bar & Bench
kannada.barandbench.com