ನ್ಯಾ. ಸಂದೇಶ್‌ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಎಸಿಬಿ

ಪ್ರಕರಣವನ್ನು ಸಿಜೆಐ ಎನ್‌ ವಿ ರಮಣ ಅವರ ಮುಂದೆ ಇಂದು ಉಲ್ಲೇಖಿಸಲಾಗಿದ್ದು ನಾಳೆಗೆ ಅದನ್ನು ವಿಚಾರಣೆಗೆ ಪಟ್ಟಿ ಮಾಡಲಾಗುವುದು ಎಂದು ಅವರು ತಿಳಿಸಿದರು.
Supreme Court and Anti-Corruption Bureau ADGP Seemanth Kumar Singh
Supreme Court and Anti-Corruption Bureau ADGP Seemanth Kumar SinghTwitter

ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಸಂದೇಶ್‌ ಅವರು ಭ್ರಷ್ಟಾಚಾರ ಪ್ರಕರಣವೊಂದರ ವಿಚಾರಣೆ ವೇಳೆ ಸಂಸ್ಥೆಯ ಹಾಗೂ ಎಡಿಜಿಪಿಯವರ ವಿರುದ್ಧ ಮಾಡಿರುವ ಟೀಕೆಗಳನ್ನು ಆಕ್ಷೇಪಿಸಿ ಕರ್ನಾಟಕ ಭ್ರಷ್ಟಾಚಾರ ನಿಗ್ರಹ ದಳವು ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದೆ.

ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಎನ್‌ ವಿ ರಮಣ, ನ್ಯಾಯಮೂರ್ತಿಗಳಾದ ಕೃಷ್ಣ ಮುರಾರಿ ಮತ್ತು ಹಿಮಾ ಕೋಹ್ಲಿ ಅವರಿದ್ದ ತ್ರಿಸದಸ್ಯ ಪೀಠದ ಮುಂದೆ ಪ್ರಕರಣವನ್ನು ಸಾಲಿಸಿಟರ್‌ ಜನರಲ್‌ ತುಷಾರ್‌ ಮೆಹ್ತಾ ಅವರು ಸೋಮವಾರ ಉಲ್ಲೇಖಿಸಿದರು.

ಈ ವೇಳೆ ಸಿಜೆಐ ಅವರು "ಏನಿದು ನ್ಯಾಯಮೂರ್ತಿಗಳನ್ನು ವರ್ಗಾವಣೆ ಮಾಡಿಸುವುದು, ಮುಂತಾಗಿ ಬೆದರಿಕೆಯೊಡ್ಡಿರುವ ವಿಚಾರ?" ಎಂದು ಪ್ರಶ್ನಿಸಿದರು.

Also Read
ಸಾರ್ವಜನಿಕ ಹಿತದೃಷ್ಟಿಯಿಂದ ವರ್ಗಾವಣೆ ಬೆದರಿಕೆ ಎದುರಿಸಲೂ ಸಿದ್ಧ: ಹೈಕೋರ್ಟ್‌ ನ್ಯಾ. ಸಂದೇಶ್‌ ಸ್ಫೋಟಕ ನುಡಿ

ಇದಕ್ಕೆ ಪ್ರತಿಕ್ರಿಯಿಸಿದ ಎಸಿಬಿ ಪರ ವಕೀಲರು, ಅದೆಲ್ಲವೂ ಮಾಧ್ಯಮಗಳಲ್ಲಿ ವರದಿಯಾಗಿರುವಂತಹದ್ದಾಗಿದ್ದು, ತಪ್ಪಾಗಿ ವರದಿಯಾಗಿದೆ. ಇದರಿಂದ ಸಂಸ್ಥೆಯ ಘನತೆಗೆ ಧಕ್ಕೆಯಾಗಿದೆ," ಎಂದು ವಿವರಿಸಿದರು.

Also Read
ನ್ಯಾ. ಸಂದೇಶ್‌ಗೆ ವರ್ಗಾವಣೆ ಬೆದರಿಕೆ: ಆಂತರಿಕ ಸಮಿತಿ ರಚಿಸಿ ತನಿಖೆ ನಡೆಸಲು ಕೋರಿ ಸಿಜೆಐಗೆ ಎಎಬಿ ಪತ್ರ

ಆಗ ಸಿಜೆಐ ಅವರು ಪ್ರಕರಣವನ್ನು ಮಂಗಳವಾರ (ಜು.12) ಪಟ್ಟಿ ಮಾಡಲಾಗುವುದು ಎಂದು ತಿಳಿಸಿದರು.

Also Read
ಸಹೋದ್ಯೋಗಿ ನ್ಯಾಯಮೂರ್ತಿ ಬಳಿ ದೆಹಲಿ ವ್ಯಕ್ತಿಯಿಂದ ನನ್ನ ಮಾಹಿತಿ ಸಂಗ್ರಹ: ಆದೇಶದಲ್ಲಿ ದಾಖಲಿಸಿದ ನ್ಯಾ. ಸಂದೇಶ್‌

ನ್ಯಾ. ಸಂದೇಶ್‌ ಅವರು ಜು.7ರ ತಮ್ಮ ಆದೇಶದಲ್ಲಿ ಎಸಿಬಿ ಹಾಗೂ ಅದರ ಮುಖ್ಯಸ್ಥರಾದ ಎಡಿಜಿಪಿ ಸೀಮಂತ್ ಕುಮಾರ್ ಸಿಂಗ್ ಅವರ ವಿರುದ್ಧ ತಾವು ಮೌಖಿಕವಾಗಿ ಮಾಡಿದ್ದ ಅವಲೋಕನಗಳಿಗೆ ಕಾರಣಗಳನ್ನು ನೀಡಿದ್ದು, ಸಂಸ್ಥೆಯ ಒಳಿತಿಗೆ ಇವು ಪೂರಕವಾಗಿಲ್ಲ ಎಂದು ದಾಖಲಿಸಿದ್ದರು. ಇದನ್ನು ಅಕ್ಷೇಪಿಸಿ ಎಸಿಬಿಯು ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದೆ. ಇದೇ ಪ್ರಕರಣದಲ್ಲಿ ತಮ್ಮ ವಿರುದ್ಧ ನ್ಯಾ. ಸಂದೇಶ್ ಅವರು ಮಾಡಿರುವ ಟೀಕೆಗಳನ್ನು ಕೈಬಿಡುವಂತೆ ಎಡಿಜಿಪಿ ಸೀಮಂತ್ ಕುಮಾರ್ ಸಿಂಗ್‌ ಅವರು ಕರ್ನಾಟಕ ಹೈಕೋರ್ಟ್‌ನಲ್ಲಿ ಅರ್ಜಿ ದಾಖಲಿಸಿರುವುದನ್ನೂ ಸಹ ಇಲ್ಲಿ ನೆನೆಯಬಹುದು.

Related Stories

No stories found.
Kannada Bar & Bench
kannada.barandbench.com