ಭಗವದ್ಗೀತೆ ಮೂಲ ದಾಖಲೆ ಕುರಿತು ವಿವರ ಕೇಳಿದ ಕರ್ನಾಟಕದ ವಕೀಲ: ಅಂತಹ ಮಾಹಿತಿ ಇಲ್ಲ ಎಂದ ಕೇಂದ್ರ ಸಂಸ್ಕೃತಿ ಸಚಿವಾಲಯ

ಭಗವದ್ಗೀತೆಯನ್ನು ಪಠ್ಯಕ್ರಮದಲ್ಲಿ ಅಳವಡಿಸುವ ಕುರಿತ ಚರ್ಚೆ ನಡೆಯುತ್ತಿರುವ ಸಂದರ್ಭದಲ್ಲಿಯೇ ಮಾಹಿತಿ ಹಕ್ಕು ಕಾಯಿದೆಯಡಿ ಭಗವದ್ಗೀತೆಯ ಮೂಲ ದಾಖಲೆಗಳನ್ನು ಕೇಳಿ ಸಲ್ಲಿಸಿದ್ದ ಅರ್ಜಿ ಮಹತ್ವ ಪಡೆದುಕೊಂಡಿದೆ.
ಭಗವದ್ಗೀತೆ ಮೂಲ ದಾಖಲೆ ಕುರಿತು ವಿವರ ಕೇಳಿದ ಕರ್ನಾಟಕದ ವಕೀಲ: ಅಂತಹ ಮಾಹಿತಿ ಇಲ್ಲ ಎಂದ ಕೇಂದ್ರ ಸಂಸ್ಕೃತಿ ಸಚಿವಾಲಯ

ಹಿಂದೂಗಳ ಪವಿತ್ರ ಗ್ರಂಥ ಭಗವದ್ಗೀತೆಯ ಮೂಲ ಕುರಿತಂತೆ ಬೆಳಗಾವಿ ಮೂಲದ ವಕೀಲ ಸುರೇಂದ್ರ ಉಗಾರೆ ಅವರು ಮಾಹಿತಿ ಹಕ್ಕು ಕಾಯಿದೆಯಡಿ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಕೇಂದ್ರ ಸಂಸ್ಕೃತಿ ಸಚಿವಾಲಯ ಅಂತಹ ಯಾವುದೇ ಮಾಹಿತಿ ಇಲ್ಲ ಎಂದು ಪ್ರತಿಕ್ರಿಯಿಸಿದೆ.

ಭಗವದ್ಗೀತೆಯ ಮೂಲ ಪುಟಗಳ ಮಾಹಿತಿ ಮತ್ತು ಅದನ್ನು ಎಲ್ಲಿ ಸಂರಕ್ಷಿಸಿಡಲಾಗಿದೆ, ಇದಕ್ಕೆ ಸಂಬಂಧಪಟ್ಟ ಅಧಿಕೃತ ಪುಸ್ತಕಗಳು ಹಾಗೂ ಅವುಗಳನ್ನು ಪ್ರಕಟಿಸಿದ ಪ್ರಕಾಶನ ಸಂಸ್ಥೆಗಳ ಹೆಸರನ್ನು ತಿಳಿಸಿ ಎಂದು ಅವರು 2005ರ ಮಾಹಿತಿ ಹಕ್ಕು ಕಾಯಿದೆಯ ಸೆಕ್ಷನ್‌ 4 ಮತ್ತು 6ರ ಅಡಿ ಕಳೆದ ವರ್ಷ ಡಿಸೆಂಬರ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಸಾರ್ವಜನಿಕ ಹಿತಾಸಕ್ತಿ ಉದ್ದೇಶದಿಂದ ಈ ಮಾಹಿತಿ ಕೋರುತ್ತಿರುವುದಾಗಿ ಅವರು ಅರ್ಜಿಯಲ್ಲಿ ತಿಳಿಸಿದ್ದರು.

A1

ಈ ಕುರಿತು ಪ್ರತಿಕ್ರಿಯಿಸಿರುವ ಸಿಪಿಐಒ ಮತ್ತು ಕೇಂದ್ರ ಸರ್ಕಾರದ ಅಧೀನ ಕಾರ್ಯದರ್ಶಿ ಅಂಜನಾ ಅಂತಹ ಮಾಹಿತಿ ಸಚಿವಾಲಯದ ತಮ್ಮ ವಿಭಾಗದಲ್ಲಿ ಲಭ್ಯವಿಲ್ಲ. ಈ ಉತ್ತರ ತೃಪ್ತಿದಾಯಕವಾಗಿರದಿದ್ದರೆ ಕಾಯಿದೆಯ ಸೆಕ್ಷನ್‌ 19ರ ಅಡಿ ಸಚಿವಾಲಯದ ಉಪ ಕಾರ್ಯದರ್ಶಿಗಳಿಗೆ ಅರ್ಜಿ ಸಲ್ಲಿಸಬಹುದು ಎಂದು ತಿಳಿಸಿದ್ದಾರೆ. ಕಳೆದ ಫೆಬ್ರವರಿಯಲ್ಲಿ ಈ ಕುರಿತು ಅವರಿಂದ ಪ್ರತಿಕ್ರಿಯೆ ದೊರೆತಿದೆ.

ಭಗವದ್ಗೀತೆಯನ್ನು ಪಠ್ಯಕ್ರಮದಲ್ಲಿ ಅಳವಡಿಸುವ ಕುರಿತ ಚರ್ಚೆ ನಡೆಯುತ್ತಿರುವ ಸಂದರ್ಭದಲ್ಲಿಯೇ ಮಾಹಿತಿ ಹಕ್ಕು ಕಾಯಿದೆಯಡಿ ಭಗವದ್ಗೀತೆಯ ಮೂಲ ದಾಖಲೆಗಳನ್ನು ಕೇಳಿ ಸಲ್ಲಿಸಿದ್ದ ಈ ಅರ್ಜಿಗೆ ಮಹತ್ವ ಬಂದಿದೆ.

Related Stories

No stories found.
Kannada Bar & Bench
kannada.barandbench.com