[ಚುಟುಕು] ʼನಾನೇಕೆ ಗಾಂಧಿ ಕೊಂದೆʼ ಸಿನಿಮಾದ ಒಟಿಟಿ ಬಿಡುಗಡೆಗೆ ತಡೆ ನೀಡಲು ನಿರಾಕರಿಸಿದ ಸುಪ್ರೀಂ ಕೋರ್ಟ್‌

Mahatma Gandhi and Nathuram Godse

Mahatma Gandhi and Nathuram Godse

Hindustan Times, Telegraph India

ಲೈಮ್‌ಲೈಟ್‌ ಒಟಿಟಿಯಲ್ಲಿ ʼನಾನೇಕೆ ಗಾಂಧಿ ಕೊಂದೆʼ (ವೈ ಐ ಕಿಲ್ಡ್‌ ಗಾಂಧಿ) ಸಿನಿಮಾ ಬಿಡುಗಡೆಗೆ ತಡೆ ನೀಡುವಂತೆ ಕೋರಿ ಸಲ್ಲಿಸಿದ್ದ ಮನವಿಯನ್ನು ಸೋಮವಾರ ಸುಪ್ರೀಂ ಕೋರ್ಟ್‌ ನಿರಾಕರಿಸಿದೆ. ಸಿನಿಮಾ ಬಿಡುಗಡೆಯಿಂದ ಸಂವಿಧಾನದ 32ನೇ ವಿಧಿಯಡಿ ಅರ್ಜಿದಾರರ ಮೂಲಭೂತ ಹಕ್ಕಿಗೆ ಚ್ಯುತಿಯಾಗಿಲ್ಲ. ಹೀಗಾಗಿ, ಈ ವಿಧಿಯಡಿ ಸಲ್ಲಿಸಲಾಗಿರುವ ಮನವಿಯನ್ನು ಪರಿಗಣಿಸಲಾಗದು ಎಂದು ನ್ಯಾ. ಇಂದಿರಾ ಬ್ಯಾನರ್ಜಿ ನೇತೃತ್ವದ ಪೀಠವು ಹೇಳಿದ್ದು, ಹೈಕೋರ್ಟ್‌ನಲ್ಲಿ ಮನವಿ ಸಲ್ಲಿಸಲು ಅರ್ಜಿದಾರರಿಗೆ ಸ್ವಾತಂತ್ರ್ಯ ಕಲ್ಪಿಸಿದೆ.

ಹೆಚ್ಚಿನ ವಿವರಗಳಿಗೆ ʼಬಾರ್‌ ಅಂಡ್‌ ಬೆಂಚ್‌ʼ ಇಂಗ್ಲಿಷ್‌ ತಾಣದ ಲಿಂಕ್‌ ಗಮನಿಸಿ.

Related Stories

No stories found.
Kannada Bar & Bench
kannada.barandbench.com