ಪಾಟಿದಾರ್ ಆಂದೋಲನ ಹಿಂಸಾಚಾರ: ಬಿಜೆಪಿಯ ಹಾರ್ದಿಕ್ ಪಟೇಲ್‌ಗೆ ಸುಪ್ರೀಂ ಕೋರ್ಟ್ ಜಾಮೀನು

ಪ್ರಕರಣದಲ್ಲಿ ಪಟೇಲ್ ಅವರಿಗೆ ಈ ಹಿಂದೆ ನೀಡಿದ್ದ ಮಧ್ಯಂತರ ಪರಿಹಾರ ಆದೇಶವನ್ನು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಎ ಎಸ್ ಬೋಪಣ್ಣ ಮತ್ತು ಹಿಮಾ ಕೊಹ್ಲಿ ಅವರಿದ್ದ ಪೀಠ ಶಾಶ್ವತಗೊಳಿಸಿದೆ.
ಪಾಟಿದಾರ್ ಆಂದೋಲನ ಹಿಂಸಾಚಾರ: ಬಿಜೆಪಿಯ ಹಾರ್ದಿಕ್ ಪಟೇಲ್‌ಗೆ ಸುಪ್ರೀಂ ಕೋರ್ಟ್ ಜಾಮೀನು
A1

ಗುಜರಾತ್‌ನಲ್ಲಿ 2015ರಲ್ಲಿ ನಡೆದ ಪಾಟಿದಾರ್ ಆಂದೋಲನದ ವೇಳೆ ದಾಖಲಾದ ಗಲಭೆ, ಹಿಂಸಾಚಾರ ಮತ್ತು ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕ ಹಾರ್ದಿಕ್ ಪಟೇಲ್‌ಗೆ ಸುಪ್ರೀಂ ಕೋರ್ಟ್ ಶುಕ್ರವಾರ ಜಾಮೀನು ನೀಡಿದೆ.

ಪ್ರಕರಣದಲ್ಲಿ ಪಟೇಲ್‌ ಅವರಿಗೆ ಈ ಹಿಂದೆ ನೀಡಿದ್ದ ಮಧ್ಯಂತರ ಪರಿಹಾರ ಆದೇಶವನ್ನು ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿಗಳಾದ ಎ ಎಸ್ ಬೋಪಣ್ಣ ಮತ್ತು ಹಿಮಾ ಕೊಹ್ಲಿ ಅವರಿದ್ದ ಪೀಠ ಶಾತ್ವತಗೊಳಿಸಿದೆ.

Also Read
ಮೋದಿ ಸಾಕ್ಷ್ಯಚಿತ್ರ ಪ್ರದರ್ಶನ ಮಾಡಿದ್ದ ವಿದ್ಯಾರ್ಥಿ ನಾಯಕ ಡಿಬಾರ್: ದೆಹಲಿ ವಿವಿ ಪ್ರತಿಕ್ರಿಯೆ ಕೇಳಿದ ಹೈಕೋರ್ಟ್

ಪಾಟಿದಾರ್ ಸಮುದಾಯಕ್ಕೆ ಮೀಸಲಾತಿ ನೀಡುವಂತೆ ಆಗ್ರಹಿಸಿ ಗುಜರಾತ್‌ನಲ್ಲಿ ಪಾಟಿದಾರ್ ಆಂದೋಲನ ನಡೆದಿತ್ತು. ಈ ವೇಳೆ ನಡೆದಿದ್ದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಪಟೇಲ್ ವಿರುದ್ಧ ಪ್ರಕರಣ ದಾಖಲಾಗಿತ್ತು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೆಹ್ಸಾನಾದ ವಿಚಾರಣಾ ನ್ಯಾಯಾಲಯವು ಪಟೇಲ್‌ ಅವರಿಗೆ ಎರಡು ವರ್ಷಗಳ ಶಿಕ್ಷೆ ವಿಧಿಸಿತ್ತು. ಈ ತೀರ್ಪನ್ನು ರದ್ದುಗೊಳಿಸಲು ಕೋರಿ ಆಗ ಕಾಂಗ್ರೆಸ್ ಪಕ್ಷದಲ್ಲಿದ್ದ ಪಟೇಲ್‌ ಗುಜರಾತ್‌ ಹೈಕೋರ್ಟ್‌ ಮೊರೆ ಹೋಗಿದ್ದರು. 2019ರ ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಿದ್ದು ತನ್ನ ಶಿಕ್ಷೆಯನ್ನು ಅಮಾನತುಗೊಳಿಸುವಂತೆ ಅವರು ಕೋರಿದ್ದರು. ಆದರೆ ಈ ಮನವಿಯನ್ನು ಹೈಕೋರ್ಟ್ ತಿರಸ್ಕರಿಸಿತ್ತು. ಇದನ್ನು ಪ್ರಶ್ನಿಸಿ ಅವರು ಸರ್ವೋಚ್ಚ ನ್ಯಾಯಾಲಯದ ಮೆಟ್ಟಿಲೇರಿದ್ದರು. ಕಳೆದ ವರ್ಷ ಏಪ್ರಿಲ್‌ನಲ್ಲಿ ಸರ್ವೋಚ್ಚ ನ್ಯಾಯಾಲಯ ಶಿಕ್ಷೆಗೆ ತಡೆ ನೀಡಿತ್ತು.

Related Stories

No stories found.
Kannada Bar & Bench
kannada.barandbench.com