ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌, ಪವಿತ್ರಗೌಡ ಸೇರಿ 17 ಆರೋಪಿಗಳ ನ್ಯಾಯಾಂಗ ಬಂಧನ ಆ.1ರವರೆಗೆ ವಿಸ್ತರಣೆ

ಪರಪ್ಪನ ಅಗ್ರಹಾರದಲ್ಲಿನ 13 ಮತ್ತು ತುಮಕೂರಿನ ಜಿಲ್ಲಾ ಕಾರಾಗೃಹದಲ್ಲಿರುವ 4 ಆರೋಪಿಗಳನ್ನು 24ನೇ ಹೆಚ್ಚುವರಿ ಮೆಟ್ರೊಪಾಲಿಟನ್‌ ಮ್ಯಾಜಿಸ್ಟ್ರೇಟ್‌ ವಿಶ್ವನಾಥ್‌ ಸಿ. ಗೌಡರ್‌ ಅವರ ಮುಂದೆ ವಿಡಿಯೋ ಕಾನ್ಫರೆನ್ಸ್‌ ಮೂಲಕ ಹಾಜರುಪಡಿಸಲಾಯಿತು.
Darshan and Pavitra Gowda
Darshan and Pavitra Gowda
Published on

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಮೊದಲನೇ ಆರೋಪಿ ಪವಿತ್ರ ಗೌಡ, ಎರಡನೇ ಆರೋಪಿ ನಟ ದರ್ಶನ್‌ ಸೇರಿ 17 ಆರೋಪಿಗಳ ನ್ಯಾಯಾಂಗ ಬಂಧನವನ್ನು 14 ದಿನ ಅಂದರೆ ಆಗಸ್ಟ್‌ 1ರ ವರೆಗೆ ವಿಸ್ತರಿಸಿ ಬೆಂಗಳೂರಿನ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯವು ಗುರುವಾರ ಆದೇಶಿಸಿದೆ.

ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿನ 13 ಮತ್ತು ತುಮಕೂರಿನ ಜಿಲ್ಲಾ ಕಾರಾಗೃಹದಲ್ಲಿರುವ 4 ಆರೋಪಿಗಳನ್ನು 24ನೇ ಹೆಚ್ಚುವರಿ ಮೆಟ್ರೊಪಾಲಿಟನ್‌ ಮ್ಯಾಜಿಸ್ಟ್ರೇಟ್‌ ವಿಶ್ವನಾಥ್‌ ಸಿ. ಗೌಡರ್‌ ಅವರ ಮುಂದೆ ವಿಡಿಯೋ ಕಾನ್ಫರೆನ್ಸ್‌ ಮೂಲಕ ಹಾಜರುಪಡಿಸಲಾಯಿತು.

ಮಾಹಿತಿ ಪಡೆದುಕೊಂಡ ಮ್ಯಾಜಿಸ್ಟ್ರೇಟ್‌ ಅವರು ಎಲ್ಲಾ ಆರೋಪಿಗಳನ್ನು ಮತ್ತೆ 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಿದರು.

Also Read
ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌, ಪವಿತ್ರ ಗೌಡ ಸೇರಿ 17 ಆರೋಪಿಗಳ ನ್ಯಾಯಾಂಗ ಬಂಧನ ಜು.18ರವರೆಗೆ ವಿಸ್ತರಣೆ

ಪ್ರಕರಣದ ಹಿನ್ನೆಲೆ: ರೇಣುಕಾಸ್ವಾಮಿ ಕೊಲೆ ಪ್ರಕರಣದ ಸಂಬಂಧ ಕಾಮಾಕ್ಷಿಪಾಳ್ಯ ಠಾಣೆಯಲ್ಲಿ ಪವಿತ್ರ ಗೌಡ, ದರ್ಶನ್‌ ಅಲಿಯಾಸ್‌ ಡಿ ಬಾಸ್‌, ಪುಟ್ಟಸ್ವಾಮಿ ಅಲಿಯಾಸ್‌ ಪವನ್‌, ರಾಘವೇಂದ್ರ, ನಂದೀಶ್‌, ಜಗದೀಶ್‌ ಅಲಿಯಾಸ್‌ ಜಗ್ಗ, ಅನುಕುಮಾರ್‌, ರವಿ ಶಂಕರ್‌ ಅಲಿಯಾಸ್‌ ರವಿ, ಧನರಾಜ್‌ ಡಿ ಅಲಿಯಾಸ್‌ ರಾಜು, ವಿನಯ್‌ ವಿ, ನಾಗರಾಜು, ಲಕ್ಷ್ಮಣ, ದೀಪಕ್‌, ಪ್ರದೂಷ್‌, ಕಾರ್ತಿಕ್‌ ಅಲಿಯಾಸ್‌ ಕಪ್ಪೆ, ಕೇಶವಮೂರ್ತಿ, ನಿಖಿಲ್‌ ನಾಯಕ್‌ ಆರೋಪಿಗಳಾಗಿದ್ದು, ಐಪಿಸಿ ಸೆಕ್ಷನ್‌ಗಳಾದ 302 (ಕೊಲೆ), 201 (ಸಾಕ್ಷ್ಯ ನಾಶ), 120 (ಬಿ) (ಕ್ರಿಮಿನಲ್‌ ಪಿತೂರಿ), 364 (ಅಪಹರಣ), 355 (ಕ್ರಿಮಿನಲ್‌ ಉದ್ದೇಶದಿಂದ), 384 (ಸುಲಿಗೆ), 143 (ಅಕ್ರಮ ಕೂಟ), 147 (ದೊಂಬಿ), 148 (ಮಾರಕಾಸ್ಟ್ರ ಬಳಕೆ) ಜೊತೆಗೆ 149 (ಏಕೈಕ ಉದ್ದೇಶದಿಂದ ಎಲ್ಲರೂ ಒಟ್ಟುಗೂಡಿ ಕೃತ್ಯ ಎಸಗಿರುವುದು) ಅಡಿ ಪ್ರಕರಣ ದಾಖಲಿಸಲಾಗಿದೆ.  

Kannada Bar & Bench
kannada.barandbench.com