ಹೈಕೋರ್ಟ್‌ ನ್ಯಾಯಮೂರ್ತಿಗಳ ಹುದ್ದೆಗೆ ರಾಮಚಂದ್ರ ಹುದ್ದಾರ, ವೆಂಕಟೇಶ ನಾಯಕ್‌ ಹೆಸರು ಶಿಫಾರಸ್ಸು ಮಾಡಿದ ಕೊಲಿಜಿಯಂ

ಹೈಕೋರ್ಟ್‌ ನ್ಯಾಯಮೂರ್ತಿಗಳ ಹುದ್ದೆಗೆ ರಾಮಚಂದ್ರ ಹುದ್ದಾರ, ವೆಂಕಟೇಶ ನಾಯಕ್‌ ಹೆಸರು ಶಿಫಾರಸ್ಸು ಮಾಡಿದ ಕೊಲಿಜಿಯಂ

ಬೆಂಗಳೂರಿನ ಪ್ರಧಾನ ಸಿಟಿ ಸಿವಿಲ್‌ ಮತ್ತು ಸತ್ರ ನ್ಯಾಯಾಧೀಶರಾದ ರಾಮಚಂದ್ರ ಡಿ. ಹುದ್ದಾರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಟಿ ವೆಂಕಟೇಶ ನಾಯಕ್‌ ಅವರ ಹೆಸರನ್ನು ಕರ್ನಾಟಕ ಹೈಕೋರ್ಟ್‌ ನ್ಯಾಯಮೂರ್ತಿಗಳನ್ನಾಗಿ ನೇಮಕ ಮಾಡಲು ಸುಪ್ರೀಂ ಕೋರ್ಟ್‌ ಕೊಲಿಜಿಯಂ ಮಂಗಳವಾರ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಿದೆ.

ಕರ್ನಾಟಕ ಹೈಕೋರ್ಟ್‌ನಲ್ಲಿ ಪ್ರಸ್ತುತ 13 ನ್ಯಾಯಮೂರ್ತಿಗಳು ಖಾಲಿ ಇವೆ.

Related Stories

No stories found.
Kannada Bar & Bench
kannada.barandbench.com