ಕರ್ನಾಟಕ ಹೈಕೋರ್ಟ್‌ನ ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಗಿ ಹಿರಿಯ ನ್ಯಾ. ಅಲೋಕ್‌ ಅರಾಧೆ ನೇಮಕ

ಹಾಲಿ ಮುಖ್ಯ ನ್ಯಾಯಮೂರ್ತಿ ರಿತುರಾಜ್‌ ಅವಸ್ಥಿ ಅವರು ಜುಲೈ 2ರಂದು ನಿವೃತ್ತಿ ಹೊಂದುತ್ತಿದ್ದು, ನಾಳೆ (ಶುಕ್ರವಾರ) ಮಧ್ಯಾಹ್ನ 2 ಗಂಟೆಗೆ ಅವರಿಗೆ ಕರ್ನಾಟಕ ರಾಜ್ಯ ವಕೀಲರ ಪರಿಷತ್‌ ಬೀಳ್ಕೊಡುಗೆ ಸಮಾರಂಭ ಆಯೋಜಿಸಿದೆ.
Justice Alok Aradhe
Justice Alok Aradhe

ಕರ್ನಾಟಕ ಹೈಕೋರ್ಟ್‌ನ ಹಿರಿಯ ನ್ಯಾಯಮೂರ್ತಿ ಅಲೋಕ್‌ ಅರಾಧೆ ಅವರನ್ನು ಜುಲೈ 3ರಿಂದ ಅನ್ವಯವಾಗುವಂತೆ ಕರ್ನಾಟಕ ಹೈಕೋರ್ಟ್‌ನ ಹಂಗಾಮಿ ಮುಖ್ಯ ನ್ಯಾಯಮೂರ್ತಿಯನ್ನಾಗಿ ನೇಮಕ ಮಾಡಿ ರಾಷ್ಟ್ರಪತಿ ಅವರು ಆದೇಶ ಮಾಡಿದ್ದಾರೆ. ಈ ಕುರಿತು ಕೇಂದ್ರ ಕಾನೂನು ಸಚಿವ ಕಿರಣ್‌ ರಿಜಿಜು ಅವರು ಗುರುವಾರ ಟ್ವೀಟ್‌ ಮಾಡಿದ್ದಾರೆ.

ನ್ಯಾ. ಅರಾಧೆ ಅವರು 1964ರ ಏಪ್ರಿಲ್‌ 13ರಂದು ಜನಿಸಿದರು. ಬಿ.ಎಸ್‌ಸಿ ಮತ್ತು ಎಲ್‌ಎಲ್‌ಬಿ ಪದವಿ ಪಡೆದ ಅವರು 1988ರ ಜುಲೈ 12ರಂದು ವಕೀಲರಾಗಿ ನೋಂದಾಯಿಸಿಕೊಂಡರು. 2007ರ ಏಪ್ರಿಲ್‌ನಲ್ಲಿ ಹಿರಿಯ ವಕೀಲರಾಗಿ ಪದೋನ್ನತಿ ಪಡೆದ ನ್ಯಾ. ಅರಾಧೆ ಅವರನ್ನು 2009ರ ಡಿಸೆಂಬರ್‌ 29ರಂದು ಮಧ್ಯಪ್ರದೇಶದ ಹೆಚ್ಚುವರಿ ನ್ಯಾಯಮೂರ್ತಿಯಾಗಿ ನೇಮಕ ಮಾಡಲಾಯಿತು. 2011ರ ಫೆಬ್ರವರಿ 15ರಂದು ಕಾಯಂಗೊಳಿಸಲಾಗಿತ್ತು. 2016ರ ಸೆಪ್ಟೆಂಬರ್‌ 16ರಂದು ಜಮ್ಮು ಮತ್ತು ಕಾಶ್ಮೀರ ಹೈಕೋರ್ಟ್‌ಗೆ ವರ್ಗಾವಣೆಗೊಂಡಿದ್ದ ನ್ಯಾಯಮೂರ್ತಿ ಅರಾಧೆ ಅವರು 2016ರ ಸೆಪ್ಟೆಂಬರ್‌ 20ರಂದು ಪದಗ್ರಹಣ ಮಾಡಿದ್ದರು. 2018ರ ಮೇ 11ರಂದು ಜಮ್ಮು ಮತ್ತು ಕಾಶ್ಮೀರ ಹೈಕೋರ್ಟ್‌ನ ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದ ನ್ಯಾ. ಅರಾಧೆ 2018ರ ಆಗಸ್ಟ್‌ 10ರವರೆಗೆ ಆ ಹುದ್ದೆಯಲ್ಲಿ ಸೇವೆ ಸಲ್ಲಿಸಿದ್ದರು. ಬಳಿಕ ಅಲ್ಲಿಂದ ಕರ್ನಾಟಕ ಹೈಕೋರ್ಟ್‌ಗೆ ವರ್ಗಾವಣೆಗೊಂಡಿದ್ದ ಅವರು 2018ರ ನವೆಂಬರ್‌ 17ರಂದು ಪದಗ್ರಹಣ ಮಾಡಿದ್ದರು.

Also Read
ಕರ್ನಾಟಕ ಹೈಕೋರ್ಟ್ ನೂತನ ಮುಖ್ಯ ನ್ಯಾಯಮೂರ್ತಿಯಾಗಿ ಅವಸ್ಥಿ: ಅವರ ವೃತ್ತಿ ಬದುಕಿನ ಸಂಕ್ಷಿಪ್ತ ಚಿತ್ರಣ ಇಲ್ಲಿದೆ…

ಹಾಲಿ ಮುಖ್ಯ ನ್ಯಾಯಮೂರ್ತಿ ರಿತುರಾಜ್‌ ಅವಸ್ಥಿ ಅವರು ಜುಲೈ 2ರಂದು ನಿವೃತ್ತಿ ಹೊಂದುತ್ತಿದ್ದು, ನಾಳೆ (ಶುಕ್ರವಾರ) ಮಧ್ಯಾಹ್ನ 2 ಗಂಟೆಗೆ ಅವರಿಗೆ ಕರ್ನಾಟಕ ರಾಜ್ಯ ವಕೀಲರ ಪರಿಷತ್‌ ಬೀಳ್ಕೊಡುಗೆ ಸಮಾರಂಭ ಆಯೋಜಿಸಿದೆ.

ನ್ಯಾ. ರಿತುರಾಜ್‌ ಅವಸ್ಥಿ ಅವರು 2021ರ ಅಕ್ಟೋಬರ್‌ 11ರಂದು ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ಪದಗ್ರಹಣ ಮಾಡಿದ್ದರು. ಅಲಹಾಬಾದ್‌ ಹೈಕೋರ್ಟ್‌ನ ಹಿರಿಯ ನ್ಯಾಯಮೂರ್ತಿ ರಿತುರಾಜ್‌ ಅವಸ್ಥಿ ಅವರಿಗೆ ಪದೋನ್ನತಿ ನೀಡಿ ಕರ್ನಾಟಕ ಹೈಕೋರ್ಟ್‌ಗೆ ವರ್ಗಾವಣೆ ಮಾಡಲಾಗಿತ್ತು.

Related Stories

No stories found.
Kannada Bar & Bench
kannada.barandbench.com