ಬಿಜೆಪಿಯ ಕಿರೀಟ್ ಸೋಮೈಯ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ ಶಿವಸೇನೆ ಉದ್ಧವ್ ಬಣದ ನಾಯಕ ಸಂಜಯ್ ರಾವುತ್

ಯಾವುದೇ ಸಾಕ್ಷ್ಯವಿಲ್ಲದೆ ಸಾರ್ವಜನಿಕವಾಗಿ ತನ್ನ ಪ್ರತಿಷ್ಠೆಗೆ ಧಕ್ಕೆ ತರಲು ಬಿಜೆಪಿ ನಾಯಕ ಸೋಮೈಯ ಟ್ವಿಟರ್‌ನಲ್ಲಿ ಮಾನನಷ್ಟ ಹೇಳಿಕೆ ನೀಡಿದ್ದಾರೆ ಎಂದು ಸಂಸದ (ರಾಜ್ಯಸಭಾ ಸದಸ್ಯ) ರಾವುತ್ ಆರೋಪಿಸಿದ್ದಾರೆ.
Kirit Somaiya and Sanjay Raut
Kirit Somaiya and Sanjay Raut facebook

ತಮ್ಮ ವಿರುದ್ಧ ಟ್ವೀಟ್‌ ಮಾಡಿರುವ ಬಿಜೆಪಿ ನಾಯಕ ಕಿರೀಟ್‌ ಸೋಮೈಯ ಅವರ ವಿರುದ್ಧ ಶಿವಸೇನಾ ಉದ್ಧವ್ ಠಾಕ್ರೆ ಬಣದ ನಾಯಕ ಮತ್ತು ಸಂಸದ ಸಂಜಯ್ ರಾವುತ್ ಅವರು ಮುಂಬೈ ನ್ಯಾಯಾಲಯದಲ್ಲಿ ಕ್ರಿಮಿನಲ್‌ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.

2022ರಿಂದ ಸೋಮೈಯ ಅವರು ರಾವುತ್ ವಿರುದ್ಧ ತಮ್ಮ ಟ್ವಿಟರ್ ಖಾತೆಯಲ್ಲಿ ಅನಗತ್ಯ ಮಾನಹಾನಿಕರ ಹೇಳಿಕೆಗಳನ್ನು ಪ್ರಕಟಿಸುತ್ತಿದ್ದಾರೆ ಎಂದು ರಾವುತ್ ತಮ್ಮ ಮನವಿಯಲ್ಲಿ ತಿಳಿಸಿದ್ದಾರೆ.

Also Read
ಪಕ್ಷಕಾರರಲ್ಲದೆಯೂ ತೀರ್ಪಿನ ಪ್ರತಿ ಪಡೆದ ಬಿಜೆಪಿಯ ಕಿರೀಟ್ ಸೋಮೈಯ: ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ಸೋಮೈಯ ಅವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ನನ್ನ ವಿರುದ್ಧ ಅವಹೇಳನಕಾರಿ ಹೇಳಿಕೆಯೊಂದಿಗೆ ಟ್ವೀಟ್ ಮಾಡಿರುವುದನ್ನು ಗಮನಿಸಿದಾಗ ನನಗೆ ಆಘಾತ ಮತ್ತು ಆಶ್ಚರ್ಯವಾಯಿತು. ಯಾವುದೇ ದೃಢ ಸಾಕ್ಷ್ಯಗಳಿಲ್ಲದೆ ನನ್ನ ವಿರುದ್ಧ ಮಾಡಿದ ಅವಹೇಳನಕಾರಿ ಹೇಳಿಕೆಗಳು ಸಮಾಜ ಮತ್ತು ಸಾರ್ವಜನಿಕರ ದೃಷ್ಟಿಯಲ್ಲಿ ನನ್ನ ಪ್ರತಿಷ್ಠೆಗೆ ಧಕ್ಕೆ ತರಲು ಪ್ರಯತ್ನಿಸುತ್ತಿವೆ” ಎಂದು ರಾವುತ್ ದೂರಿನಲ್ಲಿ ವಿವರಿಸಿದ್ದಾರೆ.

ಸಾರ್ವಜನಿಕವಾಗಿ ತನ್ನ ವ್ಯಕ್ತಿತ್ವಕ್ಕೆ ಕಳಂಕ ತರಲು  ನೀಡಲಾದ ಈ ಹೇಳಿಕೆಗಳು ಸೋಮೈಯ ಅವರ ಪುಟದಲ್ಲಿ ಇನ್ನೂ ಲಭ್ಯ ಇವೆ. ಇಂತಹ ದುರುದ್ದೇಶಪೂರಿತ ಹೇಳಿಕೆಗಳು ಸೋಮೈಯ ಅವರ ಸಂಪೂರ್ಣ ಬೇಜವಾಬ್ದಾರಿ ಮನೋಭಾವ ಸೂಚಿಸುತ್ತವೆ ಎಂದು ರಾವುತ್ ಹೇಳಿದ್ದಾರೆ.

ಹೀಗಾಗಿ ಐಪಿಸಿ ಸೆಕ್ಷನ್ 499, 500ರ ಅಡಿಯಲ್ಲಿ ನಡೆದ ಅಪರಾಧವನ್ನು ಗಣನೆಗೆ ತೆಗೆದುಕೊಳ್ಳಬೇಕು ಮತ್ತು ಸೋಮೈಯ ಅವರನ್ನು ಆರೋಪಿಯಾಗಿ ಪರಿಗಣಿಸಬೇಕು ಎಂದು ಮುಂಬೈನ ಮುಲುಂಡ್‌ನಲ್ಲಿರುವ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯಕ್ಕೆ ರಾವುತ್‌ ಮನವಿ ಮಾಡಿದ್ದಾರೆ.

Related Stories

No stories found.
Kannada Bar & Bench
kannada.barandbench.com