ಮೂಸೆ ವಾಲಾ ಹತ್ಯೆ ತನಿಖೆ ಸಿಬಿಐಗೆ ವರ್ಗಾಯಿಸಲು ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ

ಹತ್ಯೆಗೆ ಒಂದು ದಿನ ಮೊದಲು ಪಂಜಾಬ್ ಸರ್ಕಾರ ಮೂಸೆ ವಾಲಾ ಅವರಿಗೆ ನೀಡಿದ್ದ ಭದ್ರತೆ ಹಿಂಪಡೆದಿದ್ದು ಹಾಗೂ ಮಾಧ್ಯಮಗಳಲ್ಲಿ ದೊಡ್ಡ ಮಟ್ಟದಲ್ಲಿ ಅದು ಸುದ್ದಿಯಾಗಿದ್ದರ ಬಗ್ಗೆ ಅರ್ಜಿ ಪ್ರಮುಖವಾಗಿ ಪ್ರಶ್ನೆ ಎತ್ತಿದೆ.
ಮೂಸೆ ವಾಲಾ ಹತ್ಯೆ ತನಿಖೆ ಸಿಬಿಐಗೆ ವರ್ಗಾಯಿಸಲು ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ
A1

ಪಂಜಾಬ್‌ ಪೊಲೀಸರು ತನಿಖೆ ನಡೆಸುತ್ತಿರುವ ಗಾಯಕ ಸಿಧು ಮೂಸೆ ವಾಲಾ ಹತ್ಯೆ ಪ್ರಕರಣವನ್ನು ಸಿಬಿಐಗೆ ವರ್ಗಾಯಿಸುವಂತೆ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಕೆಯಾಗಿದೆ (ಜಗ್ಜಿತ್‌ ಸಿಂಗ್‌ ಮತ್ತು ಪಂಜಾಬ್‌ ಸರ್ಕಾರ ನಡುವಣ ಪ್ರಕರಣ).

Also Read
ಪೊಲೀಸರು ಎನ್‌ಕೌಂಟರ್‌ ಮಾಡಬಹುದೆಂದು ದೆಹಲಿ ಹೈಕೋರ್ಟ್ ಮೊರೆ ಹೋದ ಮೂಸೆ ವಾಲಾ ಹತ್ಯೆ ಆರೋಪಿ ಲಾರೆನ್ಸ್ ಬಿಷ್ಣೋಯ್

ಘಟನೆಗೆ ಸಂಬಂಧಿಸಿದಂತೆ ಮೇ 29ರಂದು ಐಪಿಸಿ ಮತ್ತು ಶಸ್ತ್ರಾಸ್ತ್ರ ಕಾಯಿದೆಯಡಿ ದಾಖಲಾಗಿರುವ ಎಫ್‌ಐಆರ್‌ ಅನ್ನು ಸಿಬಿಐಗೆ ವಹಿಸಬೇಕೆಂದು ಬಿಜೆಪಿ ನಾಯಕ ಜಗಜಿತ್‌ ಸಿಂಗ್‌ ಸಲ್ಲಿಸಿರುವ ಅರ್ಜಿ ಕೋರಿದೆ.

Also Read
ರಕ್ಷಣೆ ಕೋರಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್‌ನಿಂದ ಹಿಂಪಡೆದ ಗಾಯಕ ಸಿಧು ಹತ್ಯೆ ಆರೋಪಿ ಬಿಷ್ಣೋಯ್

“ಹಾಡು ಹಗಲೇ ತಣ್ಣನೆ ಕ್ರೌರ್ಯ ನಡೆದಿರುವ ರೀತಿ ನೋಡಿದರೆ ಪಂಜಾಬ್‌ ಸರ್ಕಾರ ಅಪರಾಧ ತಡೆಗಟ್ಟುವಲ್ಲಿ ಮಾತ್ರ ವಿಫಲವಾಗಿಲ್ಲ ಬದಲಿಗೆ ಗ್ಯಾಂಗ್‌ ವಾರ್‌ಗಳನ್ನು ನಿಗ್ರಹಿಸುವಲ್ಲಿಯೂ ದಯನೀಯವಾಗಿ ಸೋತಿದೆ” ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.

Also Read
ಮೂಸೆ ವಾಲಾ ಹತ್ಯೆ ಪ್ರಕರಣ: ಹಾಲಿ ಹೈಕೋರ್ಟ್‌ ನ್ಯಾಯಮೂರ್ತಿ ನೇತೃತ್ವದ ತನಿಖೆಗೆ ಕೋರಲಿರುವ ಪಂಜಾಬ್ ಸರ್ಕಾರ

ಮನವಿಯ ಪ್ರಮುಖಾಂಶಗಳು

  • ಹತ್ಯೆಗೆ ಒಂದು ದಿನ ಮೊದಲು ಪಂಜಾಬ್‌ ಸರ್ಕಾರ ಮೂಸೆ ವಾಲಾ ಅವರಿಗೆ ನೀಡಿದ್ದ ಭದ್ರತೆ ಹಿಂಪಡೆದಿತ್ತು. ಇದು ಮಾಧ್ಯಮಗಳಲ್ಲಿ ದೊಡ್ಡಮಟ್ಟದಲ್ಲಿ ಸುದ್ದಿಯಾಗಿತ್ತು.

  • ಕೃತ್ಯ ಎಸಗಿರುವವರಲ್ಲಿ ಒಬ್ಬನಾದ ಮನ್‌ಪ್ರೀತ್‌ ಸಿಂಗ್‌ ಉತ್ತರಾಖಂಡ ರಾಜ್ಯದಲ್ಲಿ ಸಿಕ್ಕಿಬಿದ್ದ ನಂತರ ಆತನನ್ನು ಬಂಧಿಸಲಾಗಿದೆ. ಕಾನೂನಿನಿಂದ ತಪ್ಪಿಸಿಕೊಳ್ಳಲು ಇತರ ಆರೋಪಿಗಳು ಕೂಡ ಪಲಾಯನ ಮಾಡಿರುವ ಸಾಧ್ಯತೆಗಳಿವೆ.

  • ಖಲಿಸ್ತಾನಿ ಚಳವಳಿಯಿಂದ ರಾಜ್ಯ ಮುಕ್ತವಾಗಿಲ್ಲದ ಕಾರಣ ಖಲಿಸ್ತಾನ್‌ ಸ್ಥಾಪನೆಗೆ ಯತ್ನಿಸುತ್ತಿರುವ ಪ್ರತ್ಯೇಕತಾವಾದಿಗಳ ಪಾತ್ರವನ್ನೂ ಪ್ರಕರಣದಲ್ಲಿ ತಳ್ಳಿ ಹಾಕುವಂತಿಲ್ಲ.

Related Stories

No stories found.
Kannada Bar & Bench
kannada.barandbench.com