
Bombay High Court
ಉದ್ಯೋಗಿಯೊಬ್ಬನ ಆತ್ಮಹತ್ಯೆಗೆ ಕುಮ್ಮಕ್ಕು ನೀಡಿದ ಆರೋಪ ಹೊತ್ತಿದ್ದ ಕಂಪನಿಯೊಂದರ ನಿರ್ದೇಶಕರಿಗೆ ಬಾಂಬೆ ಹೈಕೋರ್ಟ್ ಇತ್ತೀಚೆಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ [ಡಾ. ಸುರೇಂದ್ರ ಮಾಂಜ್ರೇಕರ್ ಮತ್ತು ಮಹಾರಾಷ್ಟ್ರ ಸರ್ಕಾರ ನಡುವಣ ಪ್ರಕರಣ]. ಕಂಪನಿಯಲ್ಲಿನ ಒತ್ತಡದ ಕಾರಣದಿಂದ ಆತ್ಮಹತ್ಯೆ ನೌಕರ ಮಾಡಿಕೊಂಡಿದ್ದಾರೆ ಎಂಬ ಆರೋಪಗಳಿದ್ದರೂ, ಕಂಪನಿ ತನ್ನ ಹಿತದೃಷ್ಟಿಯಿಂದ ವ್ಯವಹಾರ ನಡೆಸಲು ಅರ್ಹವಾಗಿದೆ ಎಂದು ನ್ಯಾಯಾಲಯ ಹೇಳಿದೆ. ಮಾನಸಿಕ ಒತ್ತಡ ನಿರ್ವಹಣೆಗಾಗಿ ಉದ್ಯೋಗಿಯು ಚಿಕಿತ್ಸೆ ಪಡೆಯುತ್ತಿದ್ದರು ಹಾಗೂ ಮಾನಸಿಕವಾಗಿ ಪ್ರಕ್ಷುಬ್ಧ ಮನಸ್ಥಿತಿಯಲ್ಲಿದ್ದರು ಎನ್ನುವ ಪ್ರಥಮ ವರ್ತಮಾನ ವರದಿಯನ್ನು ನ್ಯಾಯಾಲಯವು ಗಮನಿಸಿತು.
ಹೆಚ್ಚಿನ ಮಾಹಿತಿಗೆ ʼಬಾರ್ ಅಂಡ್ ಬೆಂಚ್ʼ ಇಂಗ್ಲಿಷ್ ತಾಣದ ಲಿಂಕ್ ಗಮನಿಸಿ.